Thursday, February 5, 2026
Thursday, February 5, 2026

ಶಿವಮೊಗ್ಗ ಜಿಲ್ಲೆಯ ತಾಲ್ಲೂಕುಗಳಿಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಭೇಟಿ

Date:

ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ಕೆಳಕಂಡ ದಿನಾಂಕಗಳಂದು ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ಅರ್ಜಿ ಸ್ವೀಕಾರ ಮಾಡಲಿದ್ದಾರೆ.


ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದು.
ದಿ: 19-12-2022 ರಂದು ತಾಲ್ಲೂಕು ಕಚೇರಿ ಸಭಾಂಗಣ ಸಾಗರ ತಾಲ್ಲೂಕು. ದಿ: 20-12-2022 ರಂದು ತಾಲ್ಲೂಕು ಕಚೇರಿ ಸಭಾಂಗಣ ತೀರ್ಥಹಳ್ಳಿ ತಾಲ್ಲೂಕು. ದಿ: 21-12-2022 ರಂದು ತಾಲ್ಲೂಕು ಕಚೇರಿ ಸಭಾಂಗಣ ಶಿಕಾರಿಪುರ. ದಿ: 22-12-2022 ರಂದು ತಾಲ್ಲೂಕು ಕಚೇರಿ ಸಭಾಂಗಣ ಹೊಸನಗರ ತಾಲ್ಲೂಕು. ದಿನಾಂಕ: 23-12-2022 ರಂದು ತಾಲ್ಲೂಕು ಕಚೇರಿ ಸಭಾಂಗಣ ಭದ್ರಾವತಿ. ದಿನಾಂಕ: 28-12-2022 ರಂದು ತಾಲ್ಲೂಕು ಕಚೇರಿ ಸಭಾಂಗಣ ಸೊರಬ ತಾಲ್ಲೂಕು ಇಲ್ಲಿಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...