Sunday, December 14, 2025
Sunday, December 14, 2025

ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ. ಎಚ್.ಡಿ.ಕೆ. ಜನ್ಮದಿನಾಚರಣೆ

Date:

ಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ, ರೈತರ ಕಣ್ಮಣಿ ಹೆಚ್.ಡಿ.ಕುಮಾರಸ್ವಾಮಿ ಅವರ 64ನೇ ಜನ್ಮದಿನಾಚರಣೆಯನ್ನು ನಗರದ ಸರ್ಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಈ ವೇಳೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಹೊಲದ ಗದ್ದೆ ಗಿರೀಶ್ ರಾಜ್ಯದಲ್ಲಿ 2 ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಿರ್ವಹಿಸಿದ ಅವರು ರೈತರು, ಬಡವರು, ದೀನ ದಲಿತರು ಹಾಗೂ ಅಲ್ಪಸಂಖ್ಯಾತರಿಗೆ ಉತ್ತಮ ಯೋಜನೆಗಳನ್ನು ರೂಪಿಸಿ ಅನುಕೂಲ ಕಲ್ಪಿಸಿಕೊಟ್ಟಿದ್ದರು ಎಂದರು.

ದೇಶದ ಹಿರಿಯ ರಾಜಕೀಯ ಮುತ್ಸದ್ದಿಗಳು ನಿಬ್ಬೆರಗಾಗುವ ರೀತಿಯಲ್ಲಿ ಆಡಳಿತ ನೀಡಿ ಎಲ್ಲ ವರ್ಗದ ಜನಮನ ಗೆದ್ದ ಜನನಾಯಕರಾಗಿದ್ದಾರೆ. ಇದೀಗ ಪಂಚರತ್ನ ಯೋಜನೆಯ ಮೂಲಕ ನಾಡಿನ ಜನತೆಯ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

ತಾಲ್ಲೂಕು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ಎಂ.ತಿಮ್ಮಶೆಟ್ಟಿ ಮಾತನಾಡಿ ಹೆಚ್.ಡಿ.ಕೆ. ಅವರು ಜನತೆಯ ಸಮಸ್ಯೆಯನ್ನು ಅರಿಯುವ ಸಲುವಾಗಿ ಬಡವರ ಮನೆಯಲ್ಲಿ ಗ್ರಾಮವಾಸ್ತವ್ಯ ಮಾಡುವ ಮೂಲಕ ಕಷ್ಟಗಳಿಗೆ ಸ್ಪಂದಿಸುವ ಕಾಯಕದಲ್ಲಿ ನಿರಂತರಾಗಿ ತೊಡಗಿದ್ದ ಮಹಾನಾಯಕ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಅಧಿಕಾರದ ಸಮಯದಲ್ಲಿ ಜನಪರ ಯೋಜನೆಗಳಾದ ಮಕ್ಕಳಿಗೆ ಸೈಕಲ್, ಉಚಿತ ಅಕ್ಕಿ, ವೃದ್ದಾಪ್ಯದಲ್ಲಿರುವವರಿಗೆ ವಿವಿಧ ಸವಲತ್ತುಗಳನ್ನು ನೀಡಿ ಜನಮನ್ನಣೆ ಗಳಿಸಿದ ಹಿರಿಯ ರಾಜಕೀಯ ಮುತ್ಸದಿ ಎಂದು ವರ್ಣಿಸಿದರು.

ಇದೇ ವೇಳೆ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಹೆಚ್‌ಎಸ್ ಮಂಜಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಮುಖಂಡರುಗಳಾದ ಡಿ.ಕೆ.ಚಂದ್ರೇಗೌಡ, ಸಿ.ಕೆ.ಮೂರ್ತಿ, ಹುಣಸೇಮಕ್ಕಿ ಲಕ್ಷಣ , ಆನಂದೇಗೌಡ, ಚಂದ್ರಶೇಖರ್, ಶ್ರೀಮತಿ ಜಯಂತಿ, ಚಂದ್ರಶೇಖರ್ ಶಶಿಕುಮಾರ್, ರಕ್ತನಿಧಿ ಕೇಂದ್ರದ ಡಾ|| ಮುರುಳಿಧರ್, ಸಿಬ್ಬಂದಿಗಳಾದ ದಿವಾಕರ್, ಮಧುರೈ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...