Wednesday, July 8, 2026
Wednesday, July 8, 2026

ಚಿಕ್ಕಮಗಳೂರಿನಲ್ಲಿ ಬೀದಿನಾಯಿಗಳ ಕಾಟ

Date:

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಪರಿಣಾಮ ದಿನನಿತ್ಯ ಸಂಚರಿಸುವ ಮಕ್ಕಳು ಹಾಗೂ ವೃದ್ದರಿಗೆ ತೀವ್ರ ಸಮಸ್ಯೆ ಎದುರಾಗುತ್ತಿದ್ದು ಶ್ವಾನಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕು ಎಂದು ಬಡಾವಣೆಯ ನಿವಾಸಿಗಳು ನಗರಸಭಾ ಪೌರಾಯುಕ್ತರನ್ನು ಒತ್ತಾಯಿಸಿದರು.

ಈ ಸಂಬಂಧ ನಗರಸಭಾ ಆಯುಕ್ತ ಬಿ.ಸಿ.ಬಸವರಾಜ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿ ಕೋಟೆ, ದೋಣ ಕಣ ಹಾಗೂ ಹೊಸಮನೆ ಬಡಾವಣೆ ನಿವಾಸಿಗಳು ಕೂಡಲೇ ಬೀದಿನಾಯಿಗಳ ಹಾವಳಿ ತಪ್ಪಿಸಿ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಹಳ್ಳಿಕಾರ ಯುವಕರ ಸಂಘದ ಅಧ್ಯಕ್ಷ ಕೋಟೆ ಸೋಮಣ್ಣ ಬಡಾವಣೆಯ ಸುತ್ತಮುತ್ತಲು ಹಲವಾರು ಬೀದಿನಾಯಿಗಳು ವಾಸಿಸುತ್ತಿರುವ ಪರಿಣಾಮ ಮಹಿಳೆಯರು, ವೃದ್ದರು ಹಾಗೂ ಮಕ್ಕಳು ಹಗಲು ಸಮಯದಲ್ಲಿ ಭಯದಿಂದ ಓಡಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಇದೇ ಮಾರ್ಗವಾಗಿ ಬೈಕ್‌ಗಳಲ್ಲಿ ಸಂಚರಿಸುತ್ತಿರುವವರಿಗೆ ಬೀದಿನಾಯಿಗಳ ಏಕಾಏಕಿ ದಾಳಿ ಯಿಂದಾಗಿ ಕೆಲವು ಮಂದಿಗೆ ಅಪಘಾತಗಳು ಸಂಭವಿಸಿವೆ. ಈ ದಾರಿಯಲ್ಲಿ ಅನೇಕ ಮಂದಿ ರೈತಾಪಿ ವರ್ಗದವರು ವಾಸಿಸುತ್ತಿದ್ದು ಇತೀಚೆಗೆ ಹಸುಗಳಿಗೂ ಸಹ ಬೀದಿನಾಯಿಗಳು ಕಚ್ಚಿರುವ ಪರಿಣಾಮ ಸಾವನ್ನಪ್ಪಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಡಲೇ ಸಾರ್ವಜನಿಕರು ಸುಗಮ ಸಂಚಾರ ಹಾಗೂ ರೈತಾರ್ಪಿ ವರ್ಗದವರ ಹಸುಗಳಿಗೆ ಅನು ಕೂಲವಾಗುವ ನಿಟ್ಟಿನಲ್ಲಿ ಬೀದಿನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ನಿವಾಸಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆಯಲ್ಲಿ ಬಡಾವಣೆಯ ನಿವಾಸಿಗಳಾದ ಭುಜೇಂದ್ರ ರಾಜ್ ಅರಸ್, ಸಿ.ಹೆಚ್. ಶ್ರೀನಿವಾಸ್, ಚಲುವರಾಜ್, ಕುಮಾರ್‌ರಾಜ್, ಶ್ರೀಧರ್ ದೋಣ ಕಣ, ಸಿ.ಎಸ್.ರಘಣ್ಣ, ನಾಗಣ್ಣ, ಬಸವಣ್ಣ, ಧರ್ಮಣ್ಣ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...