Wednesday, June 10, 2026
Wednesday, June 10, 2026

ಮಳೂರಿನ ಗ್ರಾಮಸ್ಥರಿಗೆ ಅನುಕೂಲವಾದ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ

Date:

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ
ಡಾ.ಆರ್ ಸೆಲ್ವಮಣಿಯವರು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಿದರು.

ಜಿಲ್ಲಾಧಿಕಾರಿಗಳು ಮೊದಲಿಗೆ ಮಳೂರು ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ತೆರಳಿ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ, ಇತರೆ ವ್ಯವಸ್ಥೆಯನ್ನು ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಮಳೂರಿನ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದರು. ತದನಂತರ ಮಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿನ ಅಕ್ಷರ ದಾಸೋಹ ಆಹಾರ ಕೊಠಡಿ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಧ್ಯಾಹ್ನ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಿದರು.

ನಂತರ ಗ್ರಾಮದ ಮಾರಿಕಾಂಬ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮಸ್ಥರಿಂದ ಕುಂದುಕೊರತೆಗಳನ್ನು ಆಲಿಸಿ ಅರ್ಜಿಗಳನ್ನು ಸ್ವೀಕರಿಸಿದರು‌.

ಎಸ್‍ಸಿ/ಎಸ್‍ಟಿ ಕಾಲೋನಿಗಳಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚಿಸಿದರು. ನಂತರ ತೊಗರ್ಸಿಯ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಳ್ಳಿ, ಪ್ರಭಾರ ಐಎಎಸ್ ಅಧಿಕಾರಿ ದಲ್ಜೀತ್ ಸಿಂಗ್, ತಹಶೀಲ್ದಾರ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...

Prahlad Joshi ಸಾಗರದ ಎಲ್.ಬಿ.ಕಾಲೇಜಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಭೇಟಿ.

Prahlad Joshi ಮಾನ್ಯ ಕೇಂದ್ರ ಸರ್ಕಾರದ ಮಂತ್ರಿ ಗಳಾದ ಪ್ರಹ್ಲಾದ್ ಜೋಷಿ,...

Chamber of Commerce Shivamogga ಕಾನೂನಿನ ಅರಿವಿನಿಂದ ತೆರಿಗೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗುತ್ತದೆ- ವಿ.ಕುಮಾರ್.

Chamber of Commerce Shivamogga ದಾಖಲೆ ಪ್ರಮಾಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ...