Monday, August 3, 2026
Monday, August 3, 2026

ಹವಾಮಾನ ಮುನ್ಸೂಚನೆ ರಾಜ್ಯದಲ್ಲಿ ಮತ್ತೆ ಮಳೆ

Date:

ಕರಾವಳಿ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ 5.8ಕಿಲೋ ಮೀಟರ್ ಎತ್ತರದ ಸುಳಿಗಾಳಿ ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಉಂಟಾಗುವುದಿಲ್ಲ.

ಈ ಕಾರಣಕ್ಕೆ ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳಲಿದೆ.

ಬೆಂಗಳೂರು ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದರಿಂದಾಗಿ ನಿರಂತರವಾಗಿ ಚಳಿ, ಮಳೆ, ವಾತವರಣ ನಿರ್ಮಾಣವಾಗಿತ್ತು. ಇದರಿಂದ ಜನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...