Sunday, December 14, 2025
Sunday, December 14, 2025

ಚೆಸ್ ಸಾಧನೆಗೆ ನಿರಂತರ ಪರಿಶ್ರಮ ಮತ್ತು ತಾಳ್ಮೆ ಅಗತ್ಯ- ಕಿಶನ್ ಗಂಗೊಳ್ಳಿ

Date:

ಶಿವಮೊಗ್ಗ, ಚೆಸ್ ಸ್ಪರ್ಧೆಯಲ್ಲಿ ಸಾಧನೆ ಮಾಡಲು ನಿರಂತರ
ಪರಿಶ್ರಮ ಹಾಗೂ ತಾಳ್ಮೆ ಅತ್ಯಂತ ಅವಶ್ಯಕ ಎಂದು
ಅಂತಾರಾಷ್ಟ್ರೀಯ ಚೆಸ್ ಆಟಗಾರ, ಗ್ರಾಂಡ್ ಮಾಸ್ಟರ್ ಕಿಶನ್
ಗಂಗೊಳ್ಳಿ ಹೇಳಿದರು.

ಶಿವಮೊಗ್ಗ ನಗರದ ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ರೋಟರಿ ಕ್ಲಬ್
ಶಿವಮೊಗ್ಗ ಮಿಡ್‌ಟೌನ್ ಹಾಗೂ ನಳಂದ ಚೆಸ್ ಅಕಾಡೆಮಿ
ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಓಪನ್
ಚೆಸ್ ಪಂದ್ಯಾವಳಿ ಹಾಗೂ 16 ವರ್ಷದೊಳಗಿನ ಟೂರ್ನ್ಮೆಂಟ್ ಉದ್ಘಾಟಿಸಿ
ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಪೂರ್ಣಗೊಳಿಸಿ ವೃತ್ತಿಗೆ
ಸೇರಲು ಹತ್ತಾರು ವರ್ಷಗಳೇ ಬೇಕಾಗುತ್ತದೆ. ಚೆಸ್‌ನಲ್ಲಿ
ಮಕ್ಕಳು ಒಂದೆರಡು ವರ್ಷಗಳಲ್ಲಿ ಸಾಧನೆ ಮಾಡದಿದ್ದರೆ
ಕಲಿಕೆ ಬಿಡಿಸುವ ಪ್ರವೃತ್ತಿ ಜಾಸ್ತಿ ಇದೆ. ಆ ರೀತಿ ಆಗಬಾರದು.
ಮಕ್ಕಳಿಗೆ ವರ್ಷಗಳ ಕಾಲ ನಿರಂತರ ಕಲಿಕೆಯಲ್ಲಿ
ತೊಡಗುವಂತೆ ಪ್ರೋತ್ಸಾಹಿಸಬೇಕು. ಕಠಿಣ ಪರಿಶ್ರಮದಿಂದ
ಚೆಸ್‌ನಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷೆ ವೀಣಾ ಸುರೇಶ್
ಮಾತನಾಡಿ, ಮಕ್ಕಳು ಚೆಸ್ ಕಲಿಕೆಯಲ್ಲಿ ನಿರಂತರವಾಗಿ
ತೊಡಗಿಸಿಕೊಳ್ಳುವುದರಿಂದ ಬೌದ್ಧಿಕ ಸಾಮಾರ್ಥ್ಯ ವೃದ್ಧಿ
ಆಗುತ್ತದೆ. ನೆನಪಿನ ಶಕ್ತಿ ಹೆಚ್ಚುತ್ತದೆ. ಮರೆವಿನ ಕಾಯಿಲೆ
ತಡೆಗಟ್ಟಲು ಸಾಧ್ಯವಿದೆ. ಕಲಿಕಾ ಸಾಮಾರ್ಥ್ಯ ಹೆಚ್ಚುವುದರಿಂದ
ಶೈಕ್ಷಣಿಕ ಕ್ಷೇತ್ರಕ್ಕೂ ಅನುಕೂಲವಾಗುತ್ತದೆ.
ಸ್ಪರ್ಧೆಯಲ್ಲಿ ಸೋಲು ಗೆಲುವು ಸಾಮಾನ್ಯ. ಗೆದ್ದವರು
ಮತ್ತಷ್ಟು ಕೌಶಲ್ಯ ಹೆಚ್ಚಿಸಿಕೊಳ್ಳಲು ಗಮನ ವಹಿಸಬೇಕು.
ಸೋತವರು ಮುಂದಿನ ಪಂದ್ಯಾವಳಿಗೆ ಈಗಿನಿಂದಲೇ ಸಿದ್ಧತೆ ನಡೆಸಿ
ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮರೆವಿ
ಚೆಸ್ ಪಂದ್ಯಾವಳಿಯಲ್ಲಿ ವಿವಿಧ ವಿಭಾಗದ ಸ್ಪರ್ಧೆಗಳು
ನಡೆದವು. ಓಪನ್ ಟೂರ್ನ್ಮೆಂಟ್‌ನಲ್ಲಿ ಯಾವುದೇ ವಯಸ್ಸಿನ ಮಿತಿ
ಇರಲಿಲ್ಲ. ಯು 16,ಯು 13 ಯು
11, ಯು 9 ಹಾಗೂ ಯು 7 ವಯೋಮಿತಿಯೊಳಗಿನ
ಪಂದ್ಯಗಳು ನಡೆದವು. ಇನ್ನೂರಕ್ಕೂ ಅಧಿಕ ಸ್ಪರ್ಧಿಗಳು
ಭಾಗವಹಿಸಿದ್ದರು. ಒಟ್ಟು ಸಾವಿರ ರೂ. ಮೌಲ್ಯದ

ಬಹುಮಾನವನ್ನು ವಿಜೇತರಿಗೆ ಪ್ರಮಾಣ ಪತ್ರದೊಂದಿಗೆ
ವಿತರಿಸಲಾಯಿತು.
ನಳಂದ ಚೆಸ್ ಅಕಾಡೆಮಿಯ ಶ್ರೀಕೃಷ್ಣ ಉಡುಪ, ರೋಟರಿ ಕ್ಲಬ್
ಶಿವಮೊಗ್ಗ ಮಿಡ್‌ಟೌನ್ ಕಾರ್ಯದರ್ಶಿ ಮೀರಾ ನಾಡಿಗ್, ಮದನ್‌ಲಾಲ್,
ಸುರೇಶ್‌ಕುಮಾರ್.ಡಿ, ಉಮಾ ಅಮರ್, ಅಮರನಾಥ್, ಸುನೀತಾ ಚೇತನ್
ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...