Sunday, December 7, 2025
Sunday, December 7, 2025

ಭದ್ರಾವತಿ ವಿಐಎಸ್ಎಲ್ ನಿಂದ ಆರೋಗ್ಯ ತಪಾಸಣಾ ಶಿಬಿರ

Date:

ವಿ ಐ ಎಸ್ ಎಲ್ ಆಸ್ಪತ್ರೆ ವತಿಯಿಂದ ವಿ ಐ ಎಸ್ ಎಲ್ ಆಸ್ಪತ್ರೆ, ಸಹ್ಯಾದ್ರಿ ನಾರಾಯಣಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ದೊಡ್ಡೇರಿ ಗ್ರಾಮ ಪಂಚಾಯತ್ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಸಾಮಾನ್ಯ ಆರೋಗ್ಯ ತಪಾಸಣೆ, ಹೃದಯ ಮತ್ತು ಕಣ್ಣಿನ ತಪಾಸಣೆ, ಮೂಳೆ ಚಿಕಿತ್ಸೆಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ವಿ ಐ ಎಸ್ ಎಲ್ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ, ಜೊತೆಗೆ ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀಮತಿ ದುಲಾರಿ ಚಂದ್ವಾನಿ, ದೊಡ್ಡೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಧು ಸಿ. ಲೇಪಾಕ್ಷ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಮಧುಸೂಧನ್ ಉದ್ಘಾಟಿಸಿದರು.

ಸುಮಾರು 165 ಗ್ರಾಮಸ್ಥರು ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದರು.

ವಿ ಐ ಎಸ್ ಎಲ್ ಆಸ್ಪತ್ರೆಯ ತಜ್ಞರಾದ ಡಾ|| ಎಚ್.ಶೋಭಾ, ಡಾ|| ಎಮ್.ವೈ.ಸುರೇಶ್ ಮತ್ತು ಡಾ|| ಎಸ್.ಎನ್. ಸುರೇಶ್, ಸಾಮಾನ್ಯ ಆರೋಗ್ಯ, ಮೂಳೆ ಮತ್ತು ದಂತ ಸಮಸ್ಯೆಗಳ ಬಗ್ಗೆ ತಜ್ಞರ ಸಲಹೆಯನ್ನು ನೀಡಿದರು. ಇದರಲ್ಲಿ ಶ್ರೀಮತಿ ಲಿಲ್ಲಿ ಮರಿಯ, ಶ್ರೀ ಟಿ.ಎನ್. ಕೃಷ್ಣ, ಶ್ರೀ ಅಲೆನ್ ಜುಡೊ ಪಿಂಟೊ, ಶ್ರೀ ಮಧುಕರ್ ಮತ್ತು ಶ್ರೀ ಆರ್. ಮಂಜುನಾಥ್ ಸಹಕರಿಸಿದರು.

ಶಂಕರ ಕಣ್ಣಿನ ಆಸ್ಪತ್ರೆಯ ತಜ್ಞರಾದ ಡಾ|| ಮೊಹಮ್ಮದ್ ಶಹಬಾಜ್, ಶ್ರೀ ರವೀಂದ್ರ, ಶ್ರೀ ಅನ್ಶಾದ್ ಮತ್ತು ಕು.ಭೂಮಿಕಾ ನೇತ್ರ ಪರೀಕ್ಷೆಗಳನ್ನು ನಡೆಸಿ ನೇತ್ರ ಆರೈಕೆಯ ಬಗ್ಗೆ ತಜ್ಞರ ಸಲಹೆಯನ್ನು ನೀಡಿದರು.

ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞರಾದ ಡಾ|| ಶರತ್, ಡಾ|| ಮಾವಿಶ್ ಎಂ. ಕರಕ, ಕು.ಅಶ್ವಿನಿ, ಶ್ರೀಮತಿ ತಾಸಿನಾ, ಜೆನ್ನಿಫರ್, ಶ್ರೀ ಗಣೇಶ್ ಅವರು ಹೃದಯ ಸಂಬAಧಿ ಪರೀಕ್ಷೆಗಳನ್ನು ನಡೆಸಿ, ಹೃದ್ರೋಗ ಆರೈಕೆಯ ಬಗ್ಗೆ ತಜ್ಞರ ಸಲಹೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ, ದೊಡ್ಡೇರಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಮಂಜು.ಕೆ, ಶ್ರೀಮತಿ ರಾಮಕ್ಕ, ಶ್ರೀ ಆಗಶರೀಫ್, ಶ್ರೀಮತಿ ಗೌರಿಬಾಯಿ, ಶ್ರೀಮತಿ ಗಂಗಮ್ಮ, ಶ್ರೀಮತಿ ಜಾನಿ.ಜೆ.ಬಿ, ಶ್ರೀಮತಿ ಲಲಿತಾ ಗಣೇಶ್ ಡಿ.ಬಿ, ಶ್ರೀ ಶ್ರೀನಿವಾಸ್‌ರಾವ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಪಾಂಡುರಂಗ, ಶ್ರೀ ಅಣ್ಣಪ್ಪ, ಶ್ರೀ ಮಲ್ಲೇಶ್, ಶ್ರೀ ಪ್ರವೀಣ್ ಕುಮಾರ್.ಎಲ್, ಮಹಾ ಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಮತ್ತು ಶ್ರೀಮತಿ ಶೋಭ.ಕೆ.ಎಸ್, ಸಹಾಯಕ ಪ್ರಬಂಧಕರು (ಸಿಬ್ಬಂದಿ ಮತ್ತು ಸಿ.ಎಸ್.ಆರ್) ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...