Thursday, February 5, 2026
Thursday, February 5, 2026

ಫೋಟೋಗ್ರಫಿಯಲ್ಲಿ ಸಮಕಾಲೀನ ತಂತ್ರಜ್ಞಾನ ಅಳವಡಿಕೆ ಅತ್ಯಗತ್ಯ-ಡಿ.ಎಸ್.ಅರುಣ್

Date:

ಫೋಟೋಗ್ರಾಫಿ ವೃತ್ತಿಯಲ್ಲಿ ಕಾಲ ಕಾಲಕ್ಕೆ ಬದಲಾಗುವ ಹೊಸ ತಂತ್ರಜ್ಞಾನದ ಅಳವಡಿಕೆ ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಅವರು ಹೇಳಿದರು.

ಶಿವಮೊಗ್ಗ ನಗರದ ಎನ್‌ಆರ್‌ಬಿ ಸ್ಟುಡಿಯೋದಲ್ಲಿ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿ, 25 ವರ್ಷಗಳಿಂದ ಎನ್‌ಆರ್‌ಬಿ ಸ್ಟುಡಿಯೋ ಶಿವಮೊಗ್ಗ ನಗರದಜನತೆಗೆಸೇವೆ ನೀಡುತ್ತಿದ್ದು, ಹೊಸ ವಿನ್ಯಾಸದಆಧುನಿಕತಂತ್ರಜ್ಞಾನದಕ್ಯಾನನ್ ಫೈನ್‌ಆರ್ಟ್ ಪ್ರಿಂಟಿಂಗ್ ಅಳವಡಿಸಲಾಗಿದೆ.
ಅತ್ಯಾಧುನಿಕ ಸೇವೆಗಳನ್ನು ಶಿವಮೊಗ್ಗ ಜನರಿಗೆಒದಗಿಸುವಂತಾಗಲಿ ಎಂದು ಆಶಿಸಿದರು.

ಪತ್ರಕರ್ತಚಂದ್ರಕಾಂತ್ ಅವರು ಮಾತನಾಡಿ, ಹಿಂದಿನ ಕಾಲದಲ್ಲಿ ಫೋಟೋ ತೆಗೆಸಿಕೊಂಡು ಮರ‍್ನಾಲ್ಕು ದಿನದ ನಂತರ ಫೋಟೋಗಳು ಸಿಗುತ್ತಿದ್ದವು.ಆದರೆ ಇಂದಿನ ಕಾಲದಲ್ಲಿಆಧುನಿಕತಂತ್ರಜ್ಞಾನದ ನೆರವಿನಿಂದ ಕೆಲವೇ ನಿಮಿಷಗಳಲ್ಲಿ ಫೋಟೊ ಲಭ್ಯವಾಗುತ್ತವೆ.

ಬೆಂಗಳೂರಿನಲ್ಲಿ ಮಾತ್ರ ಸಿಗುತ್ತಿದ್ದ ಸೇವೆಗಳನ್ನು ಶಿವಮೊಗ್ಗದಲ್ಲಿಯೂ ಎನ್‌ಆರ್‌ಬಿ ಸ್ಟುಡಿಯೋ ಆರಂಭಿಸಿರುವುದು ಅಭಿನಂದನೀಯ ಎಂದರು.

ರೋಟರಿಯ ಮಾಜಿ ಸಹಾಯಕಗವರ್ನರ್ ಜಿ.ವಿಜಯ್‌ಕುಮಾರ್, ಹೊಸ ತಂತ್ರಜ್ಞಾನದ ಅಳವಡಿಕೆ ಜತೆಯಲ್ಲಿ ಹೆಚ್ಚಿನ ಸೇವೆಗಳನ್ನು ಎನ್‌ಆರ್‌ಬಿ ಸ್ಟುಡಿಯೋಒದಗಿಸುತ್ತದೆ. ತಂತ್ರಜ್ಞಾನದಿಂದ ಪರಿಣಾಮಕಾರಿ ಹಾಗೂ ಉತ್ತಮಗುಣಮಟ್ಟದ ಫೋಟೋತೆಗೆಯಲು ಸಾಧ್ಯವಿದೆಎಂದು ಹೇಳಿದರು.

ಭಾರತದಎಲ್ಲೆಡೆಯು ಮನೆ ಮನೆಯಿಂದಎನ್‌ಆರ್‌ಬಿ ಆನ್‌ಲೈನ್ ಸ್ಟುಡಿಯೋ ಹೊಸ ತಾಂತ್ರಿಕತೆ ಲಭ್ಯಇರುವುದುಖುಷಿಯ ಸಂಗತಿಯಾಗಿದೆ. ಹೊಸ ಟೆಕ್ನಾಲಜಿಯ ಫೊಟೋಸ್, ಫ್ರೇಮ್, ಎಲ್‌ಇಡಿ ಲೈಟ್ ಫ್ರೇಮ್, ಅಲೂಮಿನಿಯಂ ಫ್ರೇಮ್, ಮಗ್ ಪ್ರಿಂಟಿAಗ್ ಸೇವೆಗಳು ಲಭ್ಯವಿದೆಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಓಂ ಗಣೇಶ್ ಶೇಟ್, ಮಾಲೀಕ ಸತೀಶ್‌ಚಂದ್ರ, ನೇತ್ರಾವತಿ, ಅಮೋಘ, ಅಪೂರ್ವ, ಚೇತನ್, ಸುರೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...