Thursday, October 3, 2024
Thursday, October 3, 2024

ಮಡಿವಾಳ ಸಮಾಜ ಸಂಘದ ಪದಾಧಿಕಾರಿಗಳ ಆಯ್ಕೆ ಬೈಲಾ ವಿರುದ್ಧ – ನಾಗರಾಜ್

Date:

ಡಿ.11 ರಂದು ನಡೆದ ಜಿಲ್ಲಾ ಮಡಿವಾಳ ಸಮಾಜ ಸಂಘದ ಪದಾಧಿಕಾರಿಗಳ ಆಯ್ಕೆ ಆಗಿರುವುದು ಬೈಲಾಕ್ಕೆ ವಿರುದ್ಧವಾಗಿದೆ ಎಂದು ಮಡಿವಾಳ ಸಂಘದ ನಿರ್ದೇಶಕ ನಾಗರಾಜ್ ಎಂ ಆಗ್ರಹಿಸಿದ್ದಾರೆ.

ಈ ಕುರಿತು ಶಿವಮೊಗ್ಗದ ಮಿಡಿಯಾ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಸಿ.ಹನುಮಂತಪ್ಪ, ಪಿ.ಮಧು, ಕೊಟ್ಟಪ್ಪ ಎಂಬುವರು ಅನುಕ್ರಮವಾಗಿ ಉಪಾಧ್ಯಕ್ಷರಾಗಿದ್ದಾರೆ. ಸಹಕಾರ್ಯದರ್ಶಿ ಮತ್ತು ಸಂಚಾಲಕರಾಗಿದ್ದಾರೆ. ಇವರ ಹೆಸರು ಚುನಾವಣೆಯಲ್ಲಿ ಚುನಾಯಿತರಾದ ಪಟ್ಟಿಯಲ್ಲಿ ಇಲ್ಲ.ಮತ್ತು ಮಾನ್ಯತೆ ಪಡೆದ ಸಂಘಗಳ ಪಟ್ಟಿಯಲ್ಲಿ ಇಲ್ಲದವರನ್ನ ದಿಡೀರ್ ಅಂತ ಪದಾಧಿಕಾರಿಯನ್ನಾಗಿ ಮಾಡಲಾಗಿದೆ ಎಂದರು.

ಸಂಘದ ಅಂಗರಚನೆಯ ನಿಯಮ ನಿಬಂಧನೆಯ ಭಾಗ-3 ರಲ್ಲಿ 16 ರ ಪ್ರಕಾರ ತಾಲೂಕು ಸಂಘಗಳು ಜಿಲ್ಲಾ ಸಂಘದ ಮಾನ್ಯತೆ ಪಡೆದಿಲ್ಲ. ಆದ್ದರಿಂದ ಮಾನ್ಯತೆ ಹೊಂದದೆ ಇರುವ ಸಂಘಗಳ ಪ್ರತಿನಿಧಿಗಳು ಪದಾಧಿಕಾರಿಯಾಗಲು ಸಂಘದ ಕಾನೂನಿನಲ್ಲಿ ಅವಕಾಶ ಖಂಡಿತವಿಲ್ಲವೆಂದು ತಿಳಿಸಿದರು.

ಸಂಘದ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಗೆ ನಿಗದಿಯಾಗುವ ದಿನಾಂಕದ ಪೂರ್ವದ 15ದಿನಗಳ ಮುಂಚೆ ನಿಗಧಿತ ಶುಲ್ಕ ಪಾವತಿ ಮಾಡಿ ನವೀಕರಿಸಿದ ಮಾನ್ಯತೆ ಪಡೆದ ಸಂಘಗಳ ಪಟ್ಟಿಯನ್ನ ಪ್ರಕಟಿಸಿಲ್ಲ.ಮಾನ್ಯತೆ ಪಡೆದ ಸಂಘಗಳ ಪ್ರತಿನಿಧಿಗಳು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ ಎಂದು ಸಂಘದ ಚುನಾವಣಾಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಿ ಪ್ರಕಟಿಸಿಲ್ಲ. ಆದ್ದರಿಂದ ಇವರ ನೇಮಕ ರದ್ದುಪಡಿಸಬೇಕು. ಈಗಾಗಲೇ ಸಹಕಾರ ಉಪನಿಬಂಧಕರ ಗಮನಕ್ಕೆ ತರಲಾಗಿದೆ. ಒಂದು ವೇಳೆ ಸರಿಹೋಗದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಡಿವಾಳ ಸಮಾಜದ ಮುಖಂಡರಾದ ಹಿರಣ್ಣಯ್ಯ ,ಟಿ.ಎಸ್. ಗುರುಮೂರ್ತಿ , ಪ್ರಮೋದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...