ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಶಿಕಾರಿಪುರ ಕಿರಣ್ ಟಾಕೀಸ್ ಹಿಂಭಾಗದ ಮಳಿಗೆಯಲ್ಲಿ ಸಚಿನ್ ಬಿನ್ ವೀರಪ್ಪ ಚನ್ನಕೇಶವನಗರ ಇವರು ಅಕ್ರಮವಾಗಿ ದಾಸ್ತಾನು ಇರಿಸಿದ್ದ 6.75 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಈ ಅಕ್ಕಿಯನ್ನು ಡಿಸೆಂಬರ್ 28 ರಂದು ಬೆಳಿಗ್ಗೆ 11.00 ಕ್ಕೆ ಶಿಕಾರಿಪುರ ಎಪಿಎಂಸಿ ಆವರಣದ ಕೆ.ಎಫ್.ಸಿ.ಎಸ್.ಸಿ. ಸಗಟು ಮಳಿಗೆಯಲ್ಲಿ ತಹಶೀಲ್ದಾರ್ರವರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುತ್ತದೆ.
ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಶಿಕಾರಿಪುರ ತಾಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.