ಶಿವಮೊಗ್ಗ ಗ್ರಾಮದೇವತೆ ಕೋಟೆ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ದಿನಾಂಕ 22-12-2022 ಗುರುವಾರ ಬೆಳಿಗ್ಗೆ 8:30 ರಿಂದ 1:00 ವರೆಗೆ ಜನರ ಸುಖ-ಶಾಂತಿ-ನೆಮ್ಮದಿ ಮತ್ತು ದೇಶದ ಸರ್ವಾಭಿವೃದ್ಧಿಗಾಗಿ ಸಂಕಲ್ಪಿಸಿ ಶ್ರೀನವಚಂಡಿಕಾಯಾಗವನ್ನು ನೆರವೇರಿಸಲಾಗುತ್ತದೆ.
ಈ ಮಹತ್ಕಾರ್ಯಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಧಾನ ಅರ್ಚಕರಾದ ವಿದ್ವಾನ್ ಶಂಕರಾನಂದ ಜೋಯ್ಸ್ ಅವರು ತಿಳಿಸಿದ್ದಾರೆ