Friday, May 15, 2026
Friday, May 15, 2026

ನಿವೃತ್ತ ನೌಕರರಿಗೆ ಕ್ಷೇಮ ಕೇಂದ್ರ ಆರಂಭಿಸಲು ಸಂಸದ ರಾಘವೇಂದ್ರ ಮನವಿ

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ
ಶ್ರೀ ಬಿ ವೈ ರಾಘವೇಂದ್ರರವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಮನ್ಸುಖ ಮಾಂಡವೀಯ ಇವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಕುಟುಂಬಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಸೇವೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಸುಸರ್ಜಿತ ಕ್ಷೇಮ ಕೇಂದ್ರವನ್ನು ಕೂಡಲೇ ಆರಂಭಿಸಲು ಮನವಿ ಮಾಡಿಕೊಂಡರು.

ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 3500 ಸಾವಿರ ಕೇಂದ್ರ ಸರ್ಕಾರದ ನೌಕರರು ಹಾಗೂ ನಿವೃತ್ತ ನೌಕರರಿದ್ದು, ಇವರುಗಳ ಕ್ಷೇಮಾಭಿವೃದ್ಧಿಯನ್ನು ಕಾಪಾಡಿಕೊಂಡು ಬರಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಸುಸರ್ಜಿತ ಕ್ಷೇಮ ಕೇಂದ್ರದ ಅವಶ್ಯಕತೆ ಇದೆ. ಹಾಲಿ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಇಂತಹ ಕ್ಷಮಾ ಕೇಂದ್ರವನ್ನು ಕೇಂದ್ರ ಸರ್ಕಾರ ತೆರೆದಿರುತ್ತದೆ. ಆದರೆ, ತುರ್ತು ಸಂದರ್ಭಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನೆಲೆಸಿರುವ ಕೇಂದ್ರ ಸರ್ಕಾರದ ನೌಕರರಿಗೆ ಈ ಸೇವೆಯನ್ನು ಪಡೆಯಲು ಸಮಯದ ಅಭಾವದಿಂದ ಅನಾನುಕೂಲ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದು ಕ್ಷೇಮ ಕೇಂದ್ರವನ್ನು ಶಿವಮೊಗ್ಗದಲ್ಲಿ ಕೂಡಲೇ ಆರಂಭಿಸಲು ಮನವಿ ಮಾಡಿಕೊಂಡರು. ರಾಜ್ಯ ಸರ್ಕಾರದಿಂದ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಲಾಗುವುದು ಎಂದು ಈ ಸಂದರ್ಭದಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...