Thursday, September 17, 2026
Thursday, September 17, 2026

ಪತ್ರಕರ್ತರ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ ಕೆ ಲೈವ್ ನ್ಯೂಸ್ ನ ರಂಜನ್

Date:

ಚಿತ್ರದುರ್ಗದಲ್ಲಿ ನಡೆಯುತ್ತಿರುವ 6 ಜಿಲ್ಲೆಗಳ ಪತ್ರಕರ್ತ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ತಂಡವು ಸೆಮಿಫೈನಲ್ ಪ್ರವೇಶಿಸಿದೆ.

ಎರಡನೇ ದಿನದ ಇಂದಿನ ಆರಂಭಿಕ ಪಂದ್ಯಾವಳಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಎ ತಂಡದ ವಿರುದ್ಧ ರೋಚಕ ಆಟವಾಡಿದ ಶಿವಮೊಗ್ಗ ತಂಡವು 22 ರನ್ ಗಳಿಂದ ಗೆಲುವು ಸಾಧಿಸಿ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿತು.

ಟಾಸ್ ಗೆದ್ದ ಚಿತ್ರದುರ್ಗ ಎ ತಂಡದ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ಪತ್ರಕರ್ತರ ತಂಡ ನಿಗದಿತ ಐದು ಓವರ್ ಗಳಲ್ಲಿ 65 ರನ್ ಗಳನ್ನು ಗಳಿಸಿತು.

ತಂಡದ ನವೀನ್ , ಅಮೋಘ 35 ರನ್ ಗಳನ್ನು, ಲೋಹಿತ್ 28 ಗಳೊಂದಿಗೆ ಎದುರಾಳಿ ತಂಡದ ಬೌಲರ್ ಗಳನ್ನು ದಂಡಿಸಿದರು.

65 ರನ್ ಗಳ ಬೆನ್ನತ್ತಿದ ಚಿತ್ರದುರ್ಗ ಪತ್ರಕರ್ತರ ತಂಡವು ಶಿವಮೊಗ್ಗ ಪತ್ರಕರ್ತರ ತಂಡದ ಆಕಾಶ್ ಅವರ ಮಾರಕ ಬೌಲಿಂಗ್ ಮುಂದೆ ನೆಲಕಚ್ಚಿತು. ಆಕಾಶ್ ಒಂದೆ ಓವರ್ ನಲ್ಲೆ 3 ವಿಕೆಟ್ ಗಳನ್ನು ಬಲಿ ತೆಗೆದುಕೊಳ್ಳುವ ಮುಖಾಂತರ ಚಿತ್ರದುರ್ಗ ತಂಡವನ್ನು ಸೋಲಿನ ದವಡೆಗೆ ನೂಕಿದರು.

ಕೆ ಲೈವ್ ನ್ಯೂಸ್ ನ ರಂಜನ್ ಅವರು ಒಂದೇ ಕೈ ಯಲ್ಲಿ ಚೆಂಡನ್ನು ಕ್ಯಾಚ್ ಹಿಡಿದಿದ್ದಾರೆ.

ಅಂತಿಮವಾಗಿ ಚಿತ್ರದುರ್ಗ ಪತ್ರಕರ್ತರ ತಂಡವು 5 ಓವರ್ ಗಳಲ್ಲಿ 43 ಗಳಿಗೆ ಸೀಮಿತವಾಗಿ‌ ಶಿವಮೊಗ್ಗ ಪತ್ರಕರ್ತರ ತಂಡದ ಮುಂದೆ ಶರಣಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಶಾಖೆಯು ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯವಹಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...