Sunday, July 13, 2025
Sunday, July 13, 2025

ವಿಶ್ವದಲ್ಲಿ ರೋಟರಿ ಸಂಸ್ಥೆಯ ಸೇವೆ ಅನನ್ಯ-ಜಿ.ವಿಜಯಕುಮಾರ್

Date:

ವಿಶ್ವದಲ್ಲಿ ರೋಟರಿ ಸಂಸ್ಥೆಯ ಸಮಾಜಮುಖಿ ಸೇವೆ ಅನನ್ಯವಾಗಿದೆ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ರೋಟರಿ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಅವರು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಆಯೋಜಿಸಿದ್ದ ವಾರದ ಸಭೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ರೋಟರಿ ಅಂತರಾಷ್ಟೀಯ ಸಂಸ್ಥೆ ಆಗಿದ್ದು, ರೋಟರಿ ಸದಸ್ಯರು ಶಿಕ್ಷಣ, ಆರೋಗ್ಯ, ವೈದ್ಯಕೀಯ ಶಿಬಿರ, ಮಹಿಳಾ ಸಬಲೀಕರಣ ಹಾಗೂ ರೋಟರಿ ಫೌಂಡೇಶನ್‌ಗ್ಲೋಬಲ್ ಗ್ರಾಂಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶೌಚಗೃಹ, ಹೈನುಗಾರಿಕೆ, ಕುಡಿಯುವ ನೀರು, ಸ್ಮಾರ್ಟ್ ಕ್ಲಾಸ್ ಹೀಗೆ ಅನೇಕ ಸೇವಾಕಾರ್ಯಗಳ ಮುಖಾಂತರ ಜನಮನ್ನಣೆಗಳಿಸಿದೆ ಎಂದು ತಿಳಿಸಿದರು.

ರೋಟರಿಯಲ್ಲಿ ಸದಸ್ಯರ ಪಾತ್ರ ಮುಖ್ಯ. ಒಳ್ಳೆಯ ಓಡನಾಟ,ಸ್ನೇಹ,ಸೇವೆಯನ್ನು ವಿಸ್ತರಿಸುವುದರ ಮೂಲಕಜನಸ್ನೇಹಿ ಆಗುವುದರೊಂದಿಗೆ ಆತ್ಮಸಂತೋಷ ದೊರಕುತ್ತದೆ. ಈ ಸಂದರ್ಭದಲ್ಲಿಅಧ್ಯಕ್ಷರ ಒಂದು ವರ್ಷದ ಅವಧಿಯಲ್ಲಿ ಅವರು ಸಮಾಜಕ್ಕೆ ಮಾಡಿದ ಸೇವೆಯನ್ನು ಸ್ಮರಿಸಿಕೊಂಡರು.
ರೋಟರಿ ಉತ್ತರದ ಅಧ್ಯಕ್ಷಸರ್ಜಾ ಜಗದೀಶ ಮಾತನಾಡಿ, ಸದಸ್ಯರು ಕ್ಲಬ್ ಆಸ್ತಿ, ಇವರು ಕ್ಲಬ್ ನ ಎಲ್ಲಾ ಯೋಜನೆ, ಸಭೆ ಸಮಾರಂಭದಲ್ಲಿ, ಅಧಿವೇಶನ, ಅಸೆಂಬ್ಲಿಗಳಲ್ಲಿ,ವೇದಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮುಂದಿನ ಲೀಡರ್ ಆಗಬೇಕು ಅಂತ ಹೇಳಿದರು.ನಂತರ ಸಭೆಯ ಮುಖ್ಯ ಅತಿಥಿಗಳಾದ ಜಿ.ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಈ ಸಮಾರಂಭದಲ್ಲಿ ಮಾಜಿ ಸಹಾಯಕ ಗವರ್ನರ್ ರವೀಂದ್ರನಾಥ ಐತಾಳ, ಮಾಜಿ ಅಧ್ಯಕ್ಷg ಪ್ರೊ. ಡಾ.ಶಿವಲಿಂಗಪ್ಪ, ಉಮೇಶ್,ಹಾಲಪ್ಪ, ಕಾರ್ಯದರ್ಶಿ ವೆಂಕಟೇಶ ಮತ್ತು ಇನ್ನರ್ ವೀಲ್ ಮಾಜಿ ಚರ‍್ಮನ್ ವಾರಿಜಾ ಹಾಗೂ ಇತರ ರೋಟರಿ ಸದಸ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...