Monday, August 3, 2026
Monday, August 3, 2026

ಮತದಾರರ ಮನೆಸಮೀಕ್ಷೆಗೆ ಸರ್ಕಾರದ ಸಿಬ್ಬಂದಿಗಳನ್ನ ಮಾತ್ರ ನೇಮಿಸಲಾಗಿದೆ- ಡಾ.ಸೆಲ್ವಮಣಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ ಸಮೀಕ್ಷೆ ಕಾರ್ಯಕ್ರಮಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ, ಎನ್‍ಜಿಓ ಅಥವಾ ಯಾವುದೇ ವ್ಯಕ್ತಿಯನ್ನು ನಿಯೋಜಿಸಲಾಗಿಲ್ಲ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಇದಕ್ಕೆಂದು ನಿಯೋಜಸಲಾದ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳಿಂದ ಮಾತ್ರ ಸಂಗ್ರಹಿಸಲಾಗುತ್ತಿದೆ.
ಯಾವುದೇ ವ್ಯಕ್ತಿ/ಎನ್‍ಜಿಓ/ಖಾಸಗಿ ಸಂಸ್ಥೆ/ಕಂಪನಿ/ಟ್ರಸ್ಟ್‍ಗಳು ಸಾರ್ವಜನಿಕರಿಂದ ಅವರ ಖಾಸಗಿ ಅಥವಾ ಯಾವುದೇ ರೀತಿಯ ದತ್ತಾಂಶಗಳನ್ನು ಯಾವುದೇ ರೀತಿಯಲ್ಲಿ ಸಂಗ್ರಹಿಸುವುದರಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಅವರ ವಿರುದ್ದ ಸಕ್ಷಮ ಶಾಸನದ ಪ್ರಕಾರ ಮತ್ತು ಅವಶ್ಯವಿದ್ದಲ್ಲಿ ಐಪಿಸಿ ಸೆಕ್ಷನ್ 188 ರಡಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು.


ಈ ರೀತಿಯ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಟೋಲ್‍ಫ್ರೀ ಸಂಖ್ಯೆ 1950 ಮೂಲಕ ಜಿಲ್ಲಾಡಳಿತಕ್ಕೆ ದೂರು ನೀಡಬಹುದು. ಸಾರ್ವಜನಿಕರು ಶಾಸನಬದ್ದ ನಮೂನೆಗಳು ಮತ್ತು ಭಾರತೀಯ ಚುನಾವಣಾ ಆಯೋಗದ ಅರ್ಜಿಗಳಲ್ಲಿ ಮಾತ್ರ ಜಿಲ್ಲಾಡಳಿತದಿಂದ ನಿಯೋಜಿತರಾದ ಅಧಿಕಾರಿಗಳಿಗೆ, ಅಧಿಕೃತ ಬೂತ್ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...