Sunday, May 17, 2026
Sunday, May 17, 2026

ಕಾಚಿನಕಟ್ಟೆ ಶಾಲೆಯಲ್ಲಿ ಗಣಿತ ದಿನಾಚರಣೆ

Date:

ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಇವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಡಿ.22 ರಂದು ಕಾಚಿನಕಟ್ಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಭಾ.ಆ.ಸೇ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್ ಉದ್ಘಾಟಿಸಿ ಮಾತನಾಡಿ, ರಾಮನುಜನ್ ಶ್ರೀನಿವಾಸರವರ ಬದುಕಿನ ವಿವಿಧ ಪ್ರಮುಖ ಘಟ್ಟಗಳನ್ನು ವಿವರಿಸಿ, ಕಬ್ಬಿಣದ ಕಡಲೆ ಎಂದುಕೊಳ್ಳುವ ವಿಧ್ಯಾರ್ಥಿಗಳು ಗಣಿತವನ್ನು ಹೇಗೆ ತಮ್ಮದಾಗಿಸಿಕೊಳ್ಳಬಹುದೆಂದು ತಿಳಿಸಿದರು.

ಭಾರತೀಯ ಆಡಳಿತ ಸೇವೆಗೆ ಸಂಬಂಧಿಸಿದ ವಿಚಾರಗಳ ಕುರಿತು ಶಾಲಾ ವಿಧ್ಯಾರ್ಥಿಗಳೊಡನೆ ಮುಖಾಮುಖಿ ಸಂವಾದ ನಡೆಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ದಿನನಿತ್ಯದ ಜೀವನದಲ್ಲಿ ಗಣಿತದ ಪಾತ್ರದ ಕುರಿತಾಗಿ ವಿದ್ಯಾರ್ಥಿಗಳಿಗೆ ಸವಿವರಾಗಿ ತಿಳಿಸಿದ ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳಿಗೆ ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿವೆ ಎಂದು ತಿಳಿಸಿದರು.

ಕೊರಲಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ಜಿಲ್ಲಾ ಎನ್‍ಆರ್‍ಡಿಎಂಎಸ್ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ರಗಿಬ್ ಹುಸೇನ್ ಹಾಗೂ ಕೇಶವ ಪ್ರಸಾದ್ ಇಬ್ಬರು ಗಣಿತದ ಶಾಲಾ ಪಠ್ಯಕ್ಕೆ ಸಂಬಂಧಿಸಿದಂತೆ ಅನೇಕ ಮಾದರಿಯ ಸಹಾಯದಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ನೂರೈವತ್ತಕ್ಕು ಹೆಚ್ಚು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...