Wednesday, July 8, 2026
Wednesday, July 8, 2026

ಯಾವ ವಿದ್ಯಾರ್ಥಿವೇತನವನ್ನೂ ಸ್ಥಗಿತಮಾಡಿಲ್ಲ- ಶ್ರೀನಿವಾಸ ಪೂಜಾರಿ

Date:

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ‌. ಯಾವ ವಿದ್ಯಾರ್ಥಿ ವೇತನವನ್ನು ಕೂಡ ಸ್ಥಗಿತಗೊಳಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಅಧಿವೇಶನದಲ್ಲಿ ಮಾತನಾಡಿದ ಸಚಿವರು 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡಲಿದೆ.

ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ನೀಡಲಾಗುತ್ತದೆ. ಬಿಸಿಎಂ ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತದೆ. ಮಕ್ಕಳಿಗೆ ಹಾಸಿಗೆ, ಮಂಚ, ಸೋಲಾರ್, ಗೀಸರ್ ಗಳನ್ನು ಒದಗಿಸುವ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದರು. ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ನೀಡಲಾಗುತ್ತದೆ ಎಂದು ಹೇಳಿದರು.

ಪರಿಶಿಷ್ಟ ವರ್ಗದ ಮತ್ತು ಒಬಿಸಿ ಮಕ್ಕಳಿಗೆ ಯಥಾ ಸ್ಥಿತಿಯಲ್ಲಿ ವಿದ್ಯಾರ್ಥಿ ವೇತನ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ಎಲ್ಲಾ ಹಂತದ ವಿದ್ಯಾರ್ಥಿ ವೇತನ ಮುಂದುವರೆಯಲಿದೆ.

ವಿದ್ಯಾರ್ಥಿಗಳು ಆತಂಕಪಡುವುದು ಬೇಡ, ಯಾವ ವಿದ್ಯಾರ್ಥಿ ವೇತನವನ್ನು ಸ್ಥಗಿತ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಹರಿದಾಡಿತ್ತು, ಅಲ್ಲದೇ ಈ ವಿಚಾರ ವ್ಯಾಪಕ ಟೀಕೆಗೂ ಕಾರಣವಾಗಿತ್ತು.ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಸ್ಥಗಿತ ಮಾಡಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...