Sunday, September 6, 2026
Sunday, September 6, 2026

ಕ್ರೀಡಾಸ್ಪರ್ಧೆಗಳಿಂದ ಉತ್ತಮ ಆರೋಗ್ಯ- ಮಿಥುನ್ ಕುಮಾರ್

Date:

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಪ್ರತಿಯೊಬ್ಬರು ಆಸಕ್ತ ಸ್ಪರ್ಧೆಗಳಲ್ಲಿ ಅಭ್ಯಾಸ ಮಾಡಬೇಕು. ನಿರಂತರವಾಗಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಆರೋಗ್ಯ ಚೆನ್ನಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

ಐಎಂಎ ಕ್ರಿಕೆಟ್ ಅಸೋಸಿಯೆಷನ್ ಶಿವಮೊಗ್ಗ ವತಿಯಿಂದ ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ “ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆಯ ರಾಜ್ಯ ಮಟ್ಟದ ವೈದ್ಯರ ಕ್ರಿಕೆಟ್ ಪಂದ್ಯಾವಳಿ” ಉದ್ಘಾಟಿಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರಗಳು ಅತ್ಯಂತ ಕ್ರೀಯಾಶೀಲವಾಗಿದ್ದು, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿವೆ. ಬೇರೆ ಭಾಗಗಳಿಗಿಂತ ಶಿವಮೊಗ್ಗ ಉತ್ತಮ ಹೆಸರು ಪಡೆದಿದೆ. ಹೆಚ್ಚು ಕ್ರೀಯಾತ್ಮಕವಾಗಿ ಶಿವಮೊಗ್ಗ ಕಾಣಿಸುತ್ತಿದೆ. ವೈದ್ಯರ ಸಂಘವು ರಾಜ್ಯಮಟ್ಟದ ಪಂದ್ಯಾವಳಿ ಆಯೋಜಿಸಿರುವುದು ಅಭಿನಂದನೀಯ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯು ಅತ್ಯಂತ ಶ್ರಮ ವಹಿಸಿ ಕೆಲಸ ಮಾಡುವ ಇಲಾಖೆ ಆಗಿದ್ದು, ಹೆಚ್ಚು ಒತ್ತಡ ಇರುತ್ತದೆ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಕೆಲಸದ ಒತ್ತಡ ಮರೆಯಾಗುತ್ತದೆ. ಕ್ರೀಡೆ ಅತ್ಯಂತ ಉತ್ಸಾಹದಿಂದ ಇರಲು ನೆರವಾಗುತ್ತದೆ ಎಂದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಅರುಣ್ ಎಂ.ಎಸ್. ಮಾತನಾಡಿ, ಐಎಂಎ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಿದ್ದು, ಕ್ರೀಡೆ ಎಲ್ಲರಲ್ಲಿಯೂ ಸ್ಫೂರ್ತಿ ನೀಡುವ ಜತೆಯಲ್ಲಿ ಸಂಘಟನಾ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಭಾರತೀಯ ವೈದ್ಯಕೀಯ ಸಂಘದ ಸದಸ್ಯತ್ವ ನೋಂದಣಿ ಕೂಡ ಗಮನ ವಹಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಸಂಘಟನೆ ಬಲಿಷ್ಠಗೊಳ್ಳಲು ಅನುಕೂಲವಾಗಿದೆ ಎಂದು ಹೇಳಿದರು.

ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ. ಎಸ್.ಶ್ರೀಧರ್, ಸುಬ್ಬಯ್ಯ ಆಸ್ಪತ್ರೆಯ ಎಂ.ಡಿ. ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...