Monday, August 10, 2026
Monday, August 10, 2026

ಪಂಚರತ್ನ ಯೋಜನೆಗಳು ಬಡ ಮತ್ತು ಹಿಂದುಳಿದವರಿಗೆ ಅನುಕೂಲ-ತಿಮ್ಮಶೆಟ್ಟಿ

Date:

ಚಿಕ್ಕಮಗಳೂರಿನ ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ವತಿಯಿಂದ ಬೂತ್‌ಮಟ್ಟದ ಕಾರ್ಯಕರ್ತರ ಸಭೆಯನ್ನು ಕ್ಷೇತ್ರದ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ನೇತೃತ್ವದಲ್ಲಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ತಿಮ್ಮಶೆಟ್ಟಿ ಹೆಚ್.ಡಿ.ಕೆ.ಯವರ ಪಂಚರತ್ನ ಯೋಜನೆಗಳು ಅತ್ಯಂತವಾಗಿ ರೈತಾಪಿ ವರ್ಗ, ಬಡ ಹಾಗೂ ಹಿಂದುಳಿದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೂಪಿಸಲಾಗಿದ್ದು ಗ್ರಾಮ ಸ್ಥರು ಯೋಜನೆಗಳ ಸೌಲಭ್ಯಗಳನ್ನು ಅರಿತು ಜನತೆಗೆ ಸ್ಪಂದಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕುಮಾರಸ್ವಾಮಿಯವರ ಕೈಬಲಪಡಿಸಬೇಕು ಎಂದರು.

ರೈತರು ಹಾಗೂ ಜನಸಾಮಾನ್ಯರಿಗೆ ಅಧಿಕಾರ ಅವಧಿಯಲ್ಲಿ ಜನಪರ ಯೋಜನೆಗಳಿಗೆ ಒತ್ತು ನೀಡಿರುವ ಪಕ್ಷ ಜೆಡಿಎಸ್. ಇದನ್ನು ಮನಗಂಡು ಪ್ರತಿಯೊಬ್ಬರು ಮುಂದಿನ ಮಕ್ಕಳ ಭವಿಷ್ಯದ ಒಳ್ಳೆಯ ದಿನಗಳಿಗೆ ತೆನೆಹೊತ್ತ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಲ್ಲೇನಹಳ್ಳಿಯ ಪಕ್ಷದ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...