Monday, February 2, 2026
Monday, February 2, 2026

ಕ್ರಷರ್ ಮತ್ತು ಕ್ವಾರಿ ಮಾಲಿಕರಿಂದ ಗೃಹಸಚಿವರ ಜೊತೆ ಸಮಾಲೋಚನೆ

Date:

ಕ್ರಷರ್ ಮತ್ತು ಕ್ವಾರಿ ಮಾಲೀಕರಿಗೆ 5 ಪಟ್ಟು ದಂಡ ವಿಧಿಸುವ ಕ್ರಮದ ವಿರುದ್ಧವಾಗಿ ಈಗಾಗಲೇ ಕ್ರಷರ್ ಗಳನ್ನು ನಿಲ್ಲಿಸಿ ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಎಸ್ ದತ್ತಾತ್ರಿ ಅವರ ನೇತೃತ್ವದಲ್ಲಿ ಇಂದು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ತಿಳಿಸಲಾಯಿತು.

ಶ್ರೀ ಜ್ಞಾನೇಂದ್ರ ಅವರು ತಕ್ಷಣವೇ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯೊಂದಿಗೆ ಮಾತನಾಡಿ ಮಂಗಳವಾರ ಅಥವಾ ಬುಧವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ಏರ್ಪಾಟು ಮಾಡಲು ತಿಳಿಸಿ ಆ ಸಭೆಗೆ ಗಣಿ ಮತ್ತು ಭೂವಿಜ್ಞಾನ ಸಚಿವರು, ಕಾನೂನು ಸಚಿವರು, ಹಾಗೂ ಲೋಕೋಪ ಇಲಾಖೆ ಸಚಿವರು, ಮತ್ತು ರಾಜ್ಯ ಕ್ರಶರ್ ಹಾಗೂ ಕ್ವಾರಿ ಮಾಲೀಕರ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸುವಂತೆ ಸೂಚಿಸಿದರು.

ಈ ನಿಯೋಗದಲ್ಲಿ ಕ್ರಷರ್ ಹಾಗೂ ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಎನ್ ಮಂಜುನಾಥ್ ಕಂಟ್ರಾಕ್ಟರ್ ಇಬ್ರಾಹಿಂ ಶರೀಫ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ನಿರ್ದೇಶಕರಾದ ಶ್ರೀ ಗಿರೀಶ್ ಹಾಗೂ ಗುರುಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...