Monday, December 15, 2025
Monday, December 15, 2025

ಮಕ್ಕಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿವಹಿಸಬೇಕು- ವರಸಿದ್ಧಿ ವೇಣುಗೋಪಾಲ್

Date:

ಬಾಲ್ಯದಿಂದಲೇ ಕಲಿಕೆಯಲ್ಲಿ ಮಕ್ಕಳು ಹೆಚ್ಚಿನ ಆಸಕ್ತಿ ವಹಿಸಿ ಶಿಕ್ಷಣವನ್ನು ಪಡೆದುಕೊಂಡಲ್ಲಿ ಭವಿಷ್ಯದ ದಿನಗಳಲ್ಲಿ ಉನ್ನತ ಮಟ್ಟದ ಸ್ಥಾನ ಅಥವಾ ಉದ್ಯೋಗ ಪಡೆಯಲು ಸಹಕಾರಿಯಾಗಲಿದೆ ಎಂದು ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಹೇಳಿದರು.

ಚಿಕ್ಕಮಗಳೂರಿನ ನೆಲ್ಲೂರು ಸಮೀಪದ ಶಂಕರ ವಿದ್ಯಾಮಂದಿರದ 22ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿ ಶಿಕ್ಷಣ ಎಂಬುದು ವಿದ್ಯಾರ್ಥಿಗಳ ಆಸ್ತಿ. ಅದನ್ನು ಯಾರಿಂದಲೂ ಕಸಿದುಕೊಳ್ಳಲು ಅಸಾಧ್ಯ ಎಂದು ಹೇಳಿದರು.

ಶಂಕರ ವಿದ್ಯಾಮಂದಿರವು ಹಲವು ವರ್ಷಗಳಿಂದ ಸ್ವಾಮೀಜಿಯವರ ನೇತೃತ್ವದಲ್ಲಿ ಸಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಕರಿಗೆ ಭತ್ಯೆಗಳನ್ನು ಕಲ್ಪಿಸಿದೆ. ಶಾಲೆಯ ಶಿಕ್ಷಣದಲ್ಲಿ ಮುಂಜಾಗ್ರತಾ ಕ್ರಮ ವಹಿಸಿಕೊಂಡು ಉತ್ತಮ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಶ್ರಮಿಸುತ್ತಿದೆ ಎಂದರು.

ಶಿಕ್ಷಣ ಮಹತ್ವನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಮಕ್ಕಳಿಗೆ ಯಾವ ವಿಷಯದಲ್ಲಿ ಆಸಕ್ತಿ ಹೊಂದಿರುತ್ತಾರೋ ಅಂತಹ ವಿಷಯಗಳಲ್ಲಿ ಪೋಷಕರು ಆದ್ಯತೆ ನೀಡಿದ್ದಲ್ಲಿ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದು ತಿಳಿಸಿದರು.

ಶಾಲೆಯ ಸಮೀಪದಲ್ಲಿ ನಗರಸಭಾದಿಂದ ಪಾರ್ಕ್ ಅಭಿವೃದ್ದಿಪಡಿಸಿ ಶಾಲೆಗೆ ಸದ್ಯದಲ್ಲೇ ಹಸ್ತಾಂತರಿ ಸಲಾಗುವುದು. ಇದೇ ರೀತಿ ನಗರದಲ್ಲಿ ಸುಮಾರು ೨೫೦ ಪಾರ್ಕ್ಗಳನ್ನು ಅಭಿವೃದ್ದಿಪಡಿಸಿ ಸಂಘ- ಸಂಸ್ಥೆಗಳಿಗೆ ಹಸ್ತಾಂತರಿ ನಿರ್ವಹಣೆ ಮಾಡುವ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಸಂಸ್ಥಾಪಕ ಹಾಗೂ ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕಳೆದ ಎರಡು ದಶಕಗಳಿಂದ ಬಡ ಹಾಗೂ ಹಿಂದು ಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅನುಕೂಲ ಕಲ್ಪಿಸಲಾಗಿದೆ ಎಂದರು.

ಶ್ರೀ ಶಂಕರ ಸ್ವಾಮಿ ಸೇವಾ ಪ್ರತಿಷ್ಟಾನದ ಟ್ರಸ್ಟಿ ಎಂ.ಬಿ.ಅಶೋಕ್‌ಕುಮಾರ್ ಮಾತನಾಡಿ ಸತತವಾಗಿ ೨೩ನೇ ವರ್ಷಕ್ಕೆ ಪಾದಾರ್ಪಣೆ ನಡೆಸಿ ಮುನ್ನುಗುತ್ತಿರುವ ಶಾಲೆಯ ಆಡಳಿತ ಮಂಡಳಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಳೆದು ಮಧ್ಯಮ ವರ್ಗದ ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಂತಾಗಲಿ ಎಂದು ಶುಭ ಕೋರಿದರು.

ಇದೇ ವೇಳೆ ವಾರ್ಷಿಕೋತ್ಸವ ಅಂಗವಾಗಿ ಮಕ್ಕಳು ತಯಾರಿಸಿದ ವಿವಿಧ ವಸ್ತುಗಳ ಪ್ರದರ್ಶನ ಮಾಡಲಾಯಿತು. ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಗಣ್ಯರಿಂದ ಬಹುಮಾನ ವಿತರಿಸ ಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಟ್ರಸ್ಟಿಗಳಾದ ಶ್ರೀಮತಿ ಶಾರದಾ ಪುಟ್ಟಸ್ವಾಮಿ, ಪಂಚಾಚಾರ್ಯ ಸೇವಾ ಸಮಿತಿ ಮಾಜಿ ಅಧ್ಯಕ್ಷ ಐ.ಕೆ.ಲೋಕೇಶ್, ಮುಗುಳುವಳ್ಳಿ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ.ಶಿವಣ್ಣ, ಶಾಲೆಯ ಮುಖ್ಯೋಪಾಧ್ಯಾಯನಿ ಎನ್.ಎಂ.ಮಮತ, ಶಿಕ್ಷಕರಾದ ಸುಹಾಸ್, ನಾಗಲಕ್ಷ್ಮಿ ದಿವ್ಯಾ, ಚಂದನ, ವಿದ್ಯಾ, ರಶ್ಮಿ, ಸಿಬ್ಬಂದಿ ರುದ್ರಮುನಿಸ್ವಾಮಿ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...