Monday, March 23, 2026
Monday, March 23, 2026

ಯುವಜನ ಯಾವುದೇ ಕಾರಣಕ್ಕೂ ಕ್ರೀಡೆಯನ್ನ ನಿರ್ಲಕ್ಷಿಸಬಾರದು- ಪ್ರೊ.ವೀರಭದ್ರಪ್ಪ

Date:

ಸಹ್ಯಾದ್ರಿ ವಾಣಿಜ್ಯ, ವಿಜ್ಞಾನ, ಕಲಾ ಕಾಲೇಜು ಆಯೋಜಿಸಿದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ 35ನೇ ಅಂತರ್ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಬಿ. ಪಿ ವೀರಭದ್ರಪ್ಪನವರು, “ನಮ್ಮ ಸಂಸ್ಕೃತಿಯಲ್ಲಿ ದೈಹಿಕ ಪರಿಶ್ರಮಕ್ಕೆ ಹೆಚ್ಚಿನ ಆದ್ಯತೆ ಇದೆ. ಬಹಳ ಹಿಂದಿನಿಂದಲೂ ನಮ್ಮ ಗ್ರಾಮೀಣ ಜನರು ಕ್ರೀಡೆಯನ್ನು ಬದುಕಿನ ಭಾಗವಾಗಿಸಿಕೊಂಡಿದ್ದಾರೆ. ತಮ್ಮ ಬಿಡುವಿನ ಸಮಯದಲ್ಲಿ ಹಲವಾರು ಜನಪದ ಕ್ರೀಡೆಗಳಿಗೆ ನಾಟಕ ಮೊದಲಾದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವ ನೀಡಿರುವುದನ್ನು ನಾವು ಕಾಣುತ್ತೇವೆ ಹಾಗಾಗಿ ಯುವಜನರು ಯಾವುದೇ ಕಾರಣಕ್ಕೂ ಕ್ರೀಡೆಯನ್ನು ನಿರ್ಲಕ್ಷಿಸಬಾರದು. ಅದು ದೈಹಿಕ ಆರೋಗ್ಯದ ಜೊತೆಗೆ ಮನೋಲ್ಲಾಸವನ್ನು ನೀಡುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಕ್ರೀಡೆಯಲ್ಲಿ ಸಾಕಷ್ಟು ಅವಕಾಶಗಳಿವೆ. ಆದ್ದರಿಂದ ಇಂದಿನ ಯುವಕರು ಕೆಟ್ಟ ಹವ್ಯಾಸಗಳಲ್ಲಿ ತೊಡಗಿಕೊಳ್ಳದೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ” ಎಂದರು.

ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ. ಕೆ ವೀಣಾ ಅವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ. ಧನಂಜಯ ಕೆ. ಬಿ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಶ್ವರಿ ಎನ್ , ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎನ್‌.ಡಿ ವಿರೂಪಾಕ್ಷ, ಪ್ರಾಧ್ಯಾಪಕರಾದ ಡಾ. ಕುಂದನ್ ಬಸವರಾಜ್, ಡಾ.ಮೇಟಿ ಮಲ್ಲಿಕಾರ್ಜುನ, ಡಾ.ಗಿರಿಧರ್ ಕೆ.ವಿ, ಪ್ರೊ. ರಮೇಶ್ ಬಾಬು, ಡಾ.ಟಿ. ಅವಿನಾಶ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕ್ರೀಡಾಕೂಟದ ನೇತೃತ್ವ ವಹಿಸಿರುವ ಡಾ. ಶಿವಮೂರ್ತಿ ಎ. ವಂದನಾರ್ಪಣೆ ಮಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...