Sunday, June 22, 2025
Sunday, June 22, 2025

ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರ ಸ್ಥಾಪನೆ;ರಾಜ್ಯ ಸರ್ಕಾರದೊಂದಿಗೆ ಮಾತುಕತೆ

Date:

ಅಮೆರಿಕದ ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ತನ್ನ ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಪೂರ್ವಭಾವಿ ಮಾತುಕತೆ ನಡೆಸಿದೆ.

ಬೆಳಗಾವಿಯ ಸುವರ್ಣ ಸೌಧದ ವಿಧಾನಪರಿಷತ್ ಮೊಗಸಾಲೆಯಲ್ಲಿ ಸೋಮವಾರ ನಡೆದ ಈ ಮಾತುಕತೆಯಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಮುಂತಾದ ಪ್ರಮುಖ ಅಂಶಗಳನ್ನು ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಕಂಪನಿಯ ಪರವಾಗಿ ಅದರ ಸಿಇಒ ಅಮರ್ ಮಲೆತೀರ ಅವರು ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕರ್ನಾಟಕವು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಅತ್ಯುತ್ತಮ ಕಾರ್ಯ ಪರಿಸರ ಹೊಂದಿದೆ. ಜತೆಗೆ ಸರಕಾರದ ನೀತಿಗಳು ಸಂಶೋಧನೆ ಮತ್ತು ಅಭಿವೃದ್ಧಿ, ಹಾಗೂ ಉತ್ಪಾದನೆಗೆ ಪೂರಕವಾಗಿವೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಒದಗಿಸಲು ಸೂಕ್ತ ವ್ಯವಸ್ಥೆ ಇದೆ ಎಂದರು.

ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ನೆಲೆಯೂರಿದರೆ ಅಪಾರ ಬಂಡವಾಳ ಹರಿದು ಬರಲಿದೆ. ಸ್ಥಳೀಯ ಪ್ರತಿಭಾವಂತರಿಗೆ ಉದ್ಯೋಗದ ಅವಕಾಶಗಳ ಬಾಗಿಲು ತೆರೆಯಲಿದೆ. ಇದರಿಂದ ಅನಗತ್ಯ ವಲಸೆ ತಪ್ಪಿ, ಪ್ರಾದೇಶಿಕ ಅಸಮತೋಲನ ನಿವಾರಣೆಯೂ ಆಗಲಿದೆ ಎಂದು ಅವರು ನುಡಿದರು.

ಬೆಂಗಳೂರಿನ ಆಚೆಗೂ ಉದ್ಯಮಗಳು ಬರಬೇಕು ಎನ್ನುವುದು ಸರ್ಕಾರದ ನೀತಿಯಾಗಿದೆ. ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯನ್ನು ಆಯ್ದುಕೊಂಡಿರುವುದು ಸ್ವಾಗತಾರ್ಹ ಎಂದರು.

ಚರ್ಚೆಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ್ ಗುಪ್ತ ಕೂಡ ಇದ್ದರು.

ಕ್ಯಾಪ್ಯನ್;
ಅಮೆರಿಕದ ರಾಕ್ ಸ್ಪೇಸ್ ಕಂಪನಿಯ ಸಿಇಒ ಅಮರ್ ಮಲೆತೀರ ಅವರು ಐಟಿ-ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಬೆಳಗಾವಿಯಲ್ಲಿ ಸೋಮವಾರ ಮಾತುಕತೆ ನಡೆಸಿದರು. ಜೊತೆಯಲ್ಲಿ ಕೆಡಿಇಎಂ ಸಿಇಒ ಸಂಜೀವ್ ಗುಪ್ತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...