Friday, July 10, 2026
Friday, July 10, 2026

ಉರುಳಿ ಬಿದ್ದ ಸೇನಾವಾಹನ:ಮಡಿದ ಸೈನಿಕರಿಗೆ ಶ್ರದ್ಧಾಂಜಲಿ

Date:

ಇತ್ತೀಚೆಗೆ ಸಿಕ್ಕಿಂ ರಾಜ್ಯದ ವಾಹನ ಅಪಘಾತದಲ್ಲಿ ಹುತಾತ್ಮ ರಾಗಿರುವ ಭಾರತೀಯ ಸೇನೆಯ ವೀರ ಯೋಧರಿಗೆ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಚಿಕ್ಕಮಗಳೂರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಸಂಜೆ ಕ್ಯಾಂಡಲ್ ಹಿಡಿದು ಶ್ರದ್ದಾಂಜಲಿ ಸಲ್ಲಿಸ ಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸಿ.ಎಸ್.ಮಂಜುನಾಥ್ ಸೈನಿಕರು ಆಪರೇಷನ್ ಸಲು ವಾಗಿ ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ 4 ವಾಹನಗಳಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅತಿಯಾದ ಹಿಮಾದ ಪರಿಣಾಮ ಚಾಲಕ ನಿಯಂತ್ರಣ ತಪ್ಪಿ ಒಂದು ವಾಹನವು ಕಂದಕಕ್ಕೆ ಉರುಳಿದೆ ಎಂದರು.

ವಾಹನದಲ್ಲಿ ಸುಮಾರು 20 ಸೈನಿಕರು ಪ್ರಯಾಣಿಸುತ್ತಿದ್ದು, ನೂರಾರು ಅಡಿಗಳ ಎತ್ತರದಿಂದ ಕಂದಕಕ್ಕೆ ಉರುಳಿದ ಸಂದರ್ಭದಲ್ಲಿ ಸುಮಾರು 16 ಮಂದಿ ಸೈನಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಉಳಿದ 4 ಮಂದಿಯು ಅತಿಯಾದ ಗಾಯಗಳಿಂದ ಚಿಕಿತ್ಸೆಯಲ್ಲಿದ್ದಾರೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾಜಿ ಸೈನಿಕರ ಸಂಘದ ವತಿಯಿಂದ ತಾಲ್ಲೂಕು ಪಂಚಾಯಿತಿಯ ಸಂಘದ ಕಚೇರಿಯಿಂದ ಮೆರವಣಿಗೆ ನಡೆಸಿ ಮೃತರಾದ ವೀರ ಯೋಧರಿಗೆ ಜಯಘೋಷ ಕೂಗಿ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ಮೌನಾಚರಣೆ ನಡೆಸಿ ಸಂತಾಪ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ಕೃಷ್ಣೇಗೌಡ, ರಾಮಯ್ಯ, ಬಸವರಾಜ್ ಪ್ರಾಸಿಸ್ ಡಿಸೋಜಾ, ನಾಗರಾಜ್, ಹೆಚ್.ಎಂ.ಮಂಜುನಾಥ್, ಎನ್.ಸಿ.ಶಂಕರ್, ಜಬ್ಬಾರ್‌ಖಾನ್, ವೇಣು, ಗಿಡ್ಡೇಗೌಡ, ಡಿಸಿಲ್ವಾ, ರಾಮಚಂದ್ರಶೆಟ್ಟಿ, ಕುಮಾರಸ್ವಾಮಿ, ಮಹಾಬಲರಾಮ್ ರೈ, ಸಂಘದ ಪದಾಧಿಕಾರಿಗಳು, ಸಮಾನ ಮನಸ್ಕರ ಬಳಗದ ಕೋಟೆ ಸೋಮಣ್ಣ, ಕೇಶವೇಗೌಡ, ಶ್ರೀನಿವಾಸ್, ಶ್ರೀಧರ್ ದೊಣಿಖಣ, ಅಶ್ವಥ್ ನಾರಾಯಣ್, ರಘು, ಬಸವರಾಜ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...