Tuesday, March 24, 2026
Tuesday, March 24, 2026

ನನಸಾಗುವ ಹಂತದಲ್ಲಿ ವಿಮಾನ ನಿಲ್ದಾಣ:ಜಿಲ್ಲಾ ಉದ್ಯಮಕ್ಕೆ ಸಹಕಾರಿ – ಗೋಪೀನಾಥ್

Date:

ಮಲೆನಾಡಿನ ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳುತ್ತಿದೆ. ದಶಕಗಳ ಕನಸು ನನಸಾಗಲು ಕಾರಣರಾದ ಎಲ್ಲರಿಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಭಿನಂದನೆ ಸಲ್ಲಿಸಿದೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದ ಕೆಲಸಗಳನ್ನು ವೀಕ್ಷಿಸಿದರು. ಅತ್ಯಂತ ವೇಗಗತಿಯಲ್ಲಿ ಕೆಲಸ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ವಿಮಾಣ ನಿಲ್ದಾಣ ಶೀಘ್ರದಲ್ಲಿ ಆರಂಭ ಆಗುವುದರಿಂದ ಶಿವಮೊಗ್ಗ ಜಿಲ್ಲೆಯ ಉದ್ಯಮ, ಕೈಗಾರಿಕೆ, ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಮೇಲೂ ಧನಾತ್ಮಕ ಪರಿಣಾಮ ಬೀರಲಿದೆ. ಅನೇಕ ರಾಜ್ಯ, ದೇಶಗಳೊಂದಿಗೆ ವ್ಯವಹಾರ ವೃದ್ಧಿಸಲು ಸಹಕಾರಿ ಆಗಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಳ್ಳುತ್ತಿದೆ.

ಉದ್ಯಮ ಹಾಗೂ ಕೈಗಾರಿಕಾ ವಲಯದಲ್ಲಿ ಮಹತ್ತರ ಅಭಿವೃದ್ಧಿಗೆ ಕಾರಣವಾಗಲಿದೆ ಎಂಬುದು ಬಹುತೇಕ ವಾಣಿಜ್ಯೋದ್ಯಮಿಗಳ ಅನಿಸಿಕೆಯಾಗಿದೆ. ಪ್ರಯಾಣಿಕರ ಸೌಲಭ್ಯದ ಜತೆಯಲ್ಲಿ ಕಾರ್ಗೋ ಸೇವೆಯನ್ನು ಅರಂಭಿಸುವ ಅವಶ್ಯಕತೆ ಇದೆ. ಅದನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನ ವಹಿಸಿ ಈಡೇರಿಸಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕನಸಿನ ಯೋಜನೆ ಸಾಕಾರಗೊಳ್ಳುತ್ತಿದ್ದು, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಕೊಡುಗೆ ಅಪಾರವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಎಲ್ಲರ ಪರವಾಗಿ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದರು.

ಮಾಜಿ ಅಧ್ಯಕ್ಷ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಡಿ.ಎಂ.ಶಂಕರಪ್ಪ, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಎಸ್.ಎಸ್.ಉದಯ್‌ಕುಮಾರ್, ಪ್ರದೀಪ್ ಎಲಿ, ಮರಿಸ್ವಾಮಿ, ರಮೇಶ್ ಹೆಗಡೆ, ಇಂಜಿನಿಯರ್ ನಿಲೇಶ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...