Tuesday, October 1, 2024
Tuesday, October 1, 2024

ಹೊಟೆಲ್ ಕ್ಲಬ್ ರೆಸಾರ್ಟ್ ಗಳಲ್ಲಿ ಹೊಸವರ್ಷಾಚರಣೆ ಮಾರ್ಗಸೂಚಿ ಪಾಲಿಸಿ- ಮಿಥುನ್ ಕುಮಾರ್

Date:

28-12-2022 ರಂದು ಬೆಳಗ್ಗೆ 11:00 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗರವರು ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಈ ಸೂಚನೆಗಳನ್ನು ನೀಡಿದರು.

1) ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು ಬೆಳಗಿನ ಜಾವ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.

2) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.

3) ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.

4) ಮಧ್ಯ ಮಾರಾಟವನ್ನು ರಾತ್ರಿ 11:30 ರ ವರೆಗೆ ಮಾತ್ರ ಮಾಡುವುದು.

5) ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು.

6) ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಗಳನ್ನು ಬಳಸುವಂತಿಲ್ಲ.

7) ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.

8) ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸುವುದು.

9) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸುವುದು.

10) 60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತವಾಗಿರುತ್ತದೆ.

11) ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್ ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು.

12) ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ ಥರ್ಮಲ್ ಸ್ರ್ಕೀನಿಂಗ್ ಗೆ ಒಳಪಡಿಸುವುದು.

13) ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: 9480803300 / 08182-261413 ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವುದು.

ಈ ಸಂದರ್ಭದಲ್ಲಿ ಡಿವೈಎಸ್.ಪಿ ಡಿಸಿಆರ್.ಬಿ ಮತ್ತು ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ, ಪೊಲೀಸ್ ನಿರೀಕ್ಷಕರವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...