Monday, August 17, 2026
Monday, August 17, 2026

ಹೊಟೆಲ್ ಕ್ಲಬ್ ರೆಸಾರ್ಟ್ ಗಳಲ್ಲಿ ಹೊಸವರ್ಷಾಚರಣೆ ಮಾರ್ಗಸೂಚಿ ಪಾಲಿಸಿ- ಮಿಥುನ್ ಕುಮಾರ್

Date:

28-12-2022 ರಂದು ಬೆಳಗ್ಗೆ 11:00 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗರವರು ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಈ ಸೂಚನೆಗಳನ್ನು ನೀಡಿದರು.

1) ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು ಬೆಳಗಿನ ಜಾವ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.

2) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.

3) ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.

4) ಮಧ್ಯ ಮಾರಾಟವನ್ನು ರಾತ್ರಿ 11:30 ರ ವರೆಗೆ ಮಾತ್ರ ಮಾಡುವುದು.

5) ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು.

6) ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಗಳನ್ನು ಬಳಸುವಂತಿಲ್ಲ.

7) ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.

8) ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸುವುದು.

9) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸುವುದು.

10) 60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತವಾಗಿರುತ್ತದೆ.

11) ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್ ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು.

12) ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ ಥರ್ಮಲ್ ಸ್ರ್ಕೀನಿಂಗ್ ಗೆ ಒಳಪಡಿಸುವುದು.

13) ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: 9480803300 / 08182-261413 ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವುದು.

ಈ ಸಂದರ್ಭದಲ್ಲಿ ಡಿವೈಎಸ್.ಪಿ ಡಿಸಿಆರ್.ಬಿ ಮತ್ತು ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ, ಪೊಲೀಸ್ ನಿರೀಕ್ಷಕರವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...