Sunday, August 23, 2026
Sunday, August 23, 2026

ಶಬರಿಮಲೆ ಯಾತ್ರಿಕರಿಗೆ ಸರ್ಜಿ ಪ್ರತಿಷ್ಠಾನದಿಂದ ಮೆಡಿಕಲ್ ಕಿಟ್ ವಿತರಣೆ

Date:

ಶಿವಮೊಗ್ಗ:
ನಡೆದಾಡುವ ಅಯ್ಯಪ್ಪ ಶ್ರೀ ರೋಜಾ ಷಣ್ಮುಗಂ ಗುರೂಜಿಯವರ ಹುಟ್ಟಿದ ಹಬ್ಬವನ್ನು ಅವರ ಶಿಷ್ಯ ವೃಂದದಿಂದ ಭಕ್ತಿ ಪೂರ್ವಕವಾಗಿ ನಡೆಯಿತು.

ಮುಂಜಾನೆ ಸ್ವಾಮಿ ಅಯ್ಯಪ್ಪನ ಜೊತೆ ಗುರೂಜಿಯವರ ಪಾದುಕೆಯು ಗುರೂಜಿ ಅವರ ಮನೆಯಿಂದ ಹೊರಟು ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾರ್ಗವಾಗಿ ಮೆರವಣಿಗೆಯಲ್ಲಿ ಹೊಸೂಡಿ ಫಾರ್ಮಿಗೆ ತೆಗೆದುಕೊಂಡು ಹೋಗಲಾಯಿತು. ಹೊಸೂಡಿ ಗ್ರಾಮಸ್ಥರು ಹಾಗೂ ಶ್ರೀ ಶಬರೀಶ ಭಕ್ತ ಮಂಡಳಿ ವತಿಯಿಂದ ವಿಶೇಷ ಪೂಜೆ ನೆರವೇರಿಸಿದರು. ಗುರುಗಳ ದಿವ್ಯ ಸಾನಿಧ್ಯದಲ್ಲಿ ಶಿಷ್ಯರು ಅವರ ಆಶೀರ್ವಾದ ಪಡೆದರು.

ಶ್ರೀ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರೋಜಾ ಗುರೂಜಿ ಶಿಷ್ಯ ವೃಂದದಿಂದ ಏರ್ಪಡಿಸಲಾದ ಗುರುವಂದನಾ ಕಾರ್ಯಕ್ರಮವು ಪುಟಾಣಿ ಮಕ್ಕಳ ಹಾಡಿನಿಂದ ಶುರು ಮಾಡಿ, ಅಯ್ಯಪ್ಪನ ಭಜನೆ, ಡಾ.ಧನಂಜಯ್ ಸರ್ಜಿ, ಹಾಗೂ ಶಬರೀಶ್ ಗುರುಸ್ವಾಮಿಗಳು ಮಾತನಾಡಿದರು.

ಇದೇ ಸಂದರ್ಭದಲ್ಲಿ 25 ವರ್ಷ ಶಬರಿಮಲೆ ಯಾತ್ರೆ ಮಾಡಿದ ಗುರುಸ್ವಾಮಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.

ಸರ್ಜಿ ಫೌಂಡೇಶನ್ ವತಿಯಿಂದ ಡಾ. ಧನಂಜಯ ಸರ್ಜಿ ಅವರು ಶಬರಿಮಲೆ ಯಾತ್ರೆ ಮಾಡುವ ಭಕ್ತರಿಗೆ ಮೆಡಿಕಲ್ ಕಿಟ್ ಹಾಗೂ ತುರ್ತು ಆರೋಗ್ಯ ಸಮಾಲೋಚನೆಗೆ ಇಬ್ಬರು ವೈದ್ಯರ ಫೋನ್ ನಂಬರ್ ಸಹ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ರೋಜಾ ಗುರೂಜಿ ಶಿಷ್ಯ ವೃಂದ, ಹೊಸೂಡಿ ಗ್ರಾಮಸ್ಥರು ಹಾಗೂ ಶ್ರೀ ಶಬರೀಶ ಭಕ್ತ ಮಂಡಳಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...