Wednesday, January 21, 2026
Wednesday, January 21, 2026

ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದ ಬಂದಿಗಳಿಗೆ ಪೈಂಟಿಂಗ್ ತರಬೇತಿ

Date:

ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಲ್ಲಿ ಬಂಧಿಗಳಿಗೆ ಏಷಿಯನ್ ಪೈಂಟ್ ಕಂಪನಿ ವತಿಯಿಂದ ಕೆಲ ದಿನಗಳ ಹಿಂದೆ ಏರ್ಪಡಿಸಲಾಗಿದ್ದ ಪೈಂಟಿಂಗ್ ತರಬೇತಿಯಲ್ಲಿ ಸುಮಾರು 18 ಮಂದಿ ಪರಿಣಿತ ಹೊಂದಿದ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿ ಅಧೀಕ್ಷಕ ಶ್ರೀಶೈಲ ಎಸ್ ಮೇಟಿ ಪ್ರಮಾಣ ಪತ್ರವನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಶ್ರೀಶೈಲ ಎಸ್.ಮೇಟಿ ಏಷಿಯನ್ ಪೈಂಟ್ ಕಂಪನಿ ವತಿಯಿಂದ ಕಾರಾಬಂಧಿಗಳಿಗೆ ಉಚಿತವಾಗಿ ವಾಲ್‌ಪೈಂಟಿಂಗ್, ಡೀಸೈನ್ ಸೇರಿದಂತೆ ವಿವಿಧ ರೀತಿಯ ತರಬೇತಿ ನೀಡುವುದರ ಜೊತೆಗೆ ಬಂಧಿಗಳು ಬಿಡುಗಡೆ ನಂತರ ಕೆಲಸದ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿರುವು ದು ಸಂತಸದ ವಿಷಯ ಎಂದರು.

ಸರ್ಕಾರದ ವತಿಯಿಂದ ಕಾರಾಬಂಧಿಗಳಿಗೆ ದೊರೆಯುವ ವಿವಿಧ ತರಬೇತಿಯನ್ನು ನೀಡುವ ಮೂಲಕ ವೃತ್ತಿ ಬದುಕಿಗೆ ಅನುಕೂಲ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಬಂಧಿಗಳು ತರಬೇತಿಯಲ್ಲಿ ಪಾಲ್ಗೊಂಡು ಪರಿಣಿತಿ ಹೊಂದಿ ನಂತರದ ಜೀವನದಲ್ಲಿ ದುಡಿಮೆಯ ದಾರಿಕಂಡುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರ್ಟ ಆಫ್ ಲಿವಿಂಗ್‌ನ ಪ್ರವೀಣ್, ಏಷಿಯನ್ ಪೇಯಿಂಟ್ ಕಂಪನಿಯ ಸುನೀಲ್, ಜೈಲರ್ ಎಂ.ಕೆ.ನೆಲಧರಿ ಹಾಗೂ ಕಾರಾಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...