Monday, February 2, 2026
Monday, February 2, 2026

ಜಾಂಬೂರಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ರಮೇಶ್ ಶಾಸ್ತ್ರಿಅವರಿಗೆ ಸನ್ಮಾನ

Date:

ಮೂಡುಬಿದಿರೆ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಶಿವಮೊಗ್ಗ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರಿ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಶಿವಮೊಗ್ಗ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಚೇರಿ ವತಿಯಿಂದ 10 ಲಕ್ಷ ರೂ. ದೇಣಿಗೆ ನೀಡಲಾಗಿತ್ತು. 1500ಕ್ಕೂ ಮಕ್ಕಳು ಶಿವಮೊಗ್ಗ ಜಿಲ್ಲೆಯಿಂದ ಜಾಂಬೂರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಾಂಬೂರಿ ಯಶಸ್ವಿಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಧಾನ ಆಯುಕ್ತ ಎಚ್.ಡಿ.ರಮೇಶ ಶಾಸ್ತ್ರಿ ಹಾಗೂ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಣೆ ಮತ್ತು ಜಾಂಬೂರಿ ಯಶಸ್ವಿಯಾಗುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಎಚ್.ಡಿ.ರಮೇಶ ಶಾಸ್ತ್ರಿ ಅವರನ್ನು ಅಂತರಾಷ್ಟ್ರೀಯ ಜಾಂಬೂರಿ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಶಾಖೆಯಿಂದ ರಾಜ್ಯ ಪ್ರಧಾನ ಆಯುಕ್ತ, ಮಾಜಿ ಗೃಹಮಂತ್ರಿ ಪಿಜಿಆರ್ ಸಿಂಧ್ಯಾ ಹಾಗೂ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಅವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.

ಶಿವಮೊಗ್ಗ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರ ಎಲ್ಲ ಸಂದರ್ಭಗಳಲ್ಲಿ ನಿರಂತರವಾಗಿರಬೇಕು ಎಂದು ಸಿಂಧ್ಯಾ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಜಾಂಬೂರಿಯಲ್ಲಿ ಭಾಗವಹಿಸಿ ಬ್ಯಾಂಡ್ ಪ್ರದರ್ಶನವನ್ನು ಉತ್ತಮವಾಗಿ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದರು.

ಶಿವಮೊಗ್ಗದ ವಿದ್ಯಾರ್ಥಿಗಳು ಜಾಂಬೂರಿಯ ವಿವಿಧ ವೇದಿಕೆಗಳಲ್ಲಿ ಸ್ವಯಂ ಸೇವಕರಾಗಿ ಅತ್ತ್ಯುತ್ತಮ ಸೇವೆ ಸಲ್ಲಿಸಿದರು.
ಆಯುಕ್ತರಾದ ಜಿ.ವಿಜಯ್‌ಕುಮಾರ್, ರಾಜೇಶ್ ಅವಲಕ್ಕಿ, ಭಾರತಿ ಡಯಾಸ್, ವೈ.ಆರ್.ವೀರೇಶಪ್ಪ, ಶಿವಶಂಕರ್, ಕಾತ್ಯಾಯಿನಿ, ಜ್ಯೋತಿ, ಚೂಡಾಮಣಿ ಪವಾರ್, ಶಕುಂತಲ ಚಂದ್ರಶೇಖರ್, ಪರಮೇಶ್ವರ್, ಕೆ.ಪಿ.ಬಿಂದುಕುಮಾರ್, ದೀಪು, ಮಲ್ಲಿಕಾರ್ಜುನ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...