Monday, February 2, 2026
Monday, February 2, 2026

ಬೆಳವಣಿಗೆ ಹಂತದ ಮಕ್ಕಳಿಗೆ ಪೋಷಕರೇ ಹೀರೋ ಮಾದರಿಗಳು- ಮಿಥುನ್ ಕುಮಾರ್

Date:

ಶಿವಮೊಗ್ಗ : ಬೆಳವಣಿಗೆ ಹಂತದಲ್ಲಿರುವ ಮಕ್ಕಳ ಪಾಲಿಗೆ ಪೋಷಕರೇ ಹೀರೋಗಳಿದ್ದಂತೆ. ಅವರು ಹೇಳಿದ್ದನ್ನು ಕೇಳುವುದಕ್ಕಿಂತ ಪೋಷಕರನ್ನು ಅನುಸರಿಸುತ್ತಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.

ಶಿವಮೊಗ್ಗದ ಕುವೆಂಪು ರಂಗಮಂದಿರ ದಲ್ಲಿ ಆಯೋಜಿಸಿದ್ದ ಕೌಟಿಲ್ಯ ಶಾಲೆಯ ವಾರ್ಷಿಕೋತ್ಸವ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಮಾತುಗಳ ಬದಲಾಗಿ ಕೃತಿಯ ಮೂಲಕವೇ ಮಕ್ಕಳನ್ನು ತಿದ್ದಬೇಕು. ಮನೆಯಲ್ಲಿದ್ದಾಗ ಸಾಧ್ಯವಾದಷ್ಟು ತಮ್ಮ ನಡೆ ನುಡಿಗಳ ಮೇಲೆ ನಿಗಾ ವಹಿಸಬೇಕು ಜೊತೆಗೆ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡ ಬೇಕು ಎಂದು ಸಲಹೆ ನೀಡಿದರು.

ಸಹಾಯಕ ಡ್ರಗ್ ನಿಯಂತ್ರಕ ಡಾ. ಎಸ್.ವಿ. ವೀರೇಶ್‌ಬಾಬು ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಈ ಮೂಲಕ ಅವರು ದೈಹಿಕ ಮತ್ತು ಮಾನಸಿಕ ಆರೋಗ್ಯ ವಾಗಿರಲು ಸಾಧ್ಯವಾಗುತ್ತದೆ. ಮನೆಯ ಲ್ಲಿರುವಾಗ ಅವರ ನಡತೆಯನ್ನು ಗಮನಿಸಲೇಬೇಕು. ಒಂದು ವೇಳೆ ಸಣ್ಣಪುಟ್ಟ ಬದಲಾವಣೆಗಳಾದರೂ ಅದನ್ನು ಪ್ರಯತ್ನಿಸಬೇಕು. ಮಕ್ಕಳ ಮುಂದೆ ಯಾವುದೇ ಕಾರಣಕ್ಕೂ ಪೋಷಕರು ಜಗಳವಾಡಬಾರದು. ಅದು ಮಕ್ಕಳ ಸೂಕ್ಷ್ಮಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಕಾರ‍್ಯಕ್ರಮದಲ್ಲಿ ಉದ್ಯಮಿ ಕೆ.ಎಸ್. ಸಂತೋಷ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...