Saturday, December 6, 2025
Saturday, December 6, 2025

ಬೆಳವಣಿಗೆ ಹಂತದ ಮಕ್ಕಳಿಗೆ ಪೋಷಕರೇ ಹೀರೋ ಮಾದರಿಗಳು- ಮಿಥುನ್ ಕುಮಾರ್

Date:

ಶಿವಮೊಗ್ಗ : ಬೆಳವಣಿಗೆ ಹಂತದಲ್ಲಿರುವ ಮಕ್ಕಳ ಪಾಲಿಗೆ ಪೋಷಕರೇ ಹೀರೋಗಳಿದ್ದಂತೆ. ಅವರು ಹೇಳಿದ್ದನ್ನು ಕೇಳುವುದಕ್ಕಿಂತ ಪೋಷಕರನ್ನು ಅನುಸರಿಸುತ್ತಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.

ಶಿವಮೊಗ್ಗದ ಕುವೆಂಪು ರಂಗಮಂದಿರ ದಲ್ಲಿ ಆಯೋಜಿಸಿದ್ದ ಕೌಟಿಲ್ಯ ಶಾಲೆಯ ವಾರ್ಷಿಕೋತ್ಸವ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಮಾತುಗಳ ಬದಲಾಗಿ ಕೃತಿಯ ಮೂಲಕವೇ ಮಕ್ಕಳನ್ನು ತಿದ್ದಬೇಕು. ಮನೆಯಲ್ಲಿದ್ದಾಗ ಸಾಧ್ಯವಾದಷ್ಟು ತಮ್ಮ ನಡೆ ನುಡಿಗಳ ಮೇಲೆ ನಿಗಾ ವಹಿಸಬೇಕು ಜೊತೆಗೆ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡ ಬೇಕು ಎಂದು ಸಲಹೆ ನೀಡಿದರು.

ಸಹಾಯಕ ಡ್ರಗ್ ನಿಯಂತ್ರಕ ಡಾ. ಎಸ್.ವಿ. ವೀರೇಶ್‌ಬಾಬು ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಈ ಮೂಲಕ ಅವರು ದೈಹಿಕ ಮತ್ತು ಮಾನಸಿಕ ಆರೋಗ್ಯ ವಾಗಿರಲು ಸಾಧ್ಯವಾಗುತ್ತದೆ. ಮನೆಯ ಲ್ಲಿರುವಾಗ ಅವರ ನಡತೆಯನ್ನು ಗಮನಿಸಲೇಬೇಕು. ಒಂದು ವೇಳೆ ಸಣ್ಣಪುಟ್ಟ ಬದಲಾವಣೆಗಳಾದರೂ ಅದನ್ನು ಪ್ರಯತ್ನಿಸಬೇಕು. ಮಕ್ಕಳ ಮುಂದೆ ಯಾವುದೇ ಕಾರಣಕ್ಕೂ ಪೋಷಕರು ಜಗಳವಾಡಬಾರದು. ಅದು ಮಕ್ಕಳ ಸೂಕ್ಷ್ಮಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಕಾರ‍್ಯಕ್ರಮದಲ್ಲಿ ಉದ್ಯಮಿ ಕೆ.ಎಸ್. ಸಂತೋಷ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...