Sunday, December 14, 2025
Sunday, December 14, 2025

ಬೆಳವಣಿಗೆ ಹಂತದ ಮಕ್ಕಳಿಗೆ ಪೋಷಕರೇ ಹೀರೋ ಮಾದರಿಗಳು- ಮಿಥುನ್ ಕುಮಾರ್

Date:

ಶಿವಮೊಗ್ಗ : ಬೆಳವಣಿಗೆ ಹಂತದಲ್ಲಿರುವ ಮಕ್ಕಳ ಪಾಲಿಗೆ ಪೋಷಕರೇ ಹೀರೋಗಳಿದ್ದಂತೆ. ಅವರು ಹೇಳಿದ್ದನ್ನು ಕೇಳುವುದಕ್ಕಿಂತ ಪೋಷಕರನ್ನು ಅನುಸರಿಸುತ್ತಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.

ಶಿವಮೊಗ್ಗದ ಕುವೆಂಪು ರಂಗಮಂದಿರ ದಲ್ಲಿ ಆಯೋಜಿಸಿದ್ದ ಕೌಟಿಲ್ಯ ಶಾಲೆಯ ವಾರ್ಷಿಕೋತ್ಸವ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಮಾತುಗಳ ಬದಲಾಗಿ ಕೃತಿಯ ಮೂಲಕವೇ ಮಕ್ಕಳನ್ನು ತಿದ್ದಬೇಕು. ಮನೆಯಲ್ಲಿದ್ದಾಗ ಸಾಧ್ಯವಾದಷ್ಟು ತಮ್ಮ ನಡೆ ನುಡಿಗಳ ಮೇಲೆ ನಿಗಾ ವಹಿಸಬೇಕು ಜೊತೆಗೆ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡ ಬೇಕು ಎಂದು ಸಲಹೆ ನೀಡಿದರು.

ಸಹಾಯಕ ಡ್ರಗ್ ನಿಯಂತ್ರಕ ಡಾ. ಎಸ್.ವಿ. ವೀರೇಶ್‌ಬಾಬು ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಈ ಮೂಲಕ ಅವರು ದೈಹಿಕ ಮತ್ತು ಮಾನಸಿಕ ಆರೋಗ್ಯ ವಾಗಿರಲು ಸಾಧ್ಯವಾಗುತ್ತದೆ. ಮನೆಯ ಲ್ಲಿರುವಾಗ ಅವರ ನಡತೆಯನ್ನು ಗಮನಿಸಲೇಬೇಕು. ಒಂದು ವೇಳೆ ಸಣ್ಣಪುಟ್ಟ ಬದಲಾವಣೆಗಳಾದರೂ ಅದನ್ನು ಪ್ರಯತ್ನಿಸಬೇಕು. ಮಕ್ಕಳ ಮುಂದೆ ಯಾವುದೇ ಕಾರಣಕ್ಕೂ ಪೋಷಕರು ಜಗಳವಾಡಬಾರದು. ಅದು ಮಕ್ಕಳ ಸೂಕ್ಷ್ಮಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಕಾರ‍್ಯಕ್ರಮದಲ್ಲಿ ಉದ್ಯಮಿ ಕೆ.ಎಸ್. ಸಂತೋಷ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...