ಸೊರಬ ತಾಲೂಕು ತೋಟಗಾರಿಕೆ ಇಲಾಖೆಯು 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ತಮ್ಮ ಹತ್ತಿರ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಂದ ಅಥವಾ ಸೊರಬ ತೋಟಗಾರಿಕೆ ಇಲಾಖೆಯಿಂದ ಜ.2 ರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜ.25ರೊಳಗಾಗಿ ಸಲ್ಲಿಸುವಂತೆ ಸೊರಬ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.