ನ್ಯಾಯವಾದಿಗಳ ಕೊರತೆಯಿಂದಾಗಿ ದೇಶದಲ್ಲಿ 63 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ ಅವರು ಮಾಹಿತಿ ನೀಡಿದ್ದಾರೆ.
ಆಂಧ್ರಪ್ರದೇಶ ಕಾನೂನು ಅಕಾಡೆಮಿಯ ಉದ್ಘಾಟನೆಯ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು. ಜಿಲ್ಲಾ ನ್ಯಾಯಾಲಯಗಳು ನ್ಯಾಯವ್ಯವಸ್ಥೆಯ ಬೆನ್ನೆಲುಬಾಗಿದೆ. ಅದು ಕನಿಷ್ಠ ಸ್ತರದಲ್ಲಿರುವುದರಿಂದ ಅದನ್ನು ನಗಣ್ಯ ಎಣಿಸುವ ಮಾನಸಿಕತೆಯನ್ನು ನಾಗರಿಕರು ಬದಲಾಯಿಸಬೇಕು ಎಂದು ಅವರು ಕರೆ ನೀಡಿದ್ದಾರೆ.