ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ. BSY ಬಿಜೆಪಿ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಬಿಜೆಪಿ ಪಕ್ಷವನ್ನು ಇನ್ನೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಂದು ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ತಿಳಿಸಿದ್ದಾರೆ.
ಗದಗನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಬಿಎಸ್ವೈ ಮುನಿಸಿಕೊಂಡಿದ್ದಾರೆ ಎಂಬುದು ವಿರೋಧ ಪಕ್ಷದವರು ಹರಡಿಸಿರುವ ಸುಳ್ಳು ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತಾಡಿದ್ದಾರೆ. ಅದೇ ರೀತಿ ಜನಾರ್ದನ ರೆಡ್ಡಿ ಅವರು ಒಳ್ಳೆಯ ಮಾತನಾಡಿದ್ದಾರೆ. ಇದರ ಅರ್ಥ ರೆಡ್ಡಿ ಪಕ್ಷಕ್ಕೆ ಯಡಿಯೂರಪ್ಪ ಅವರ ಬೆಂಬಲ ಇದೆ ಅಂತಲ್ಲ. ಯಡಿಯೂರಪ್ಪ ಅವರು ಹಿಂದೆ ನಿಂತು ರಾಜಕೀಯ ಮಾಡಿದವರಲ್ಲ. ನೇರವಾಗಿ ರಾಜಕಾರಣ ಮಾಡುವ ಎದೆಗಾರಿಗೆ ಯಡಿಯೂರಪ್ಪ ಅವರಿಗೆ ಇದೆ ಎಂದು ತಿಳಿಸಿದ್ದಾರೆ.
