Tuesday, August 25, 2026
Tuesday, August 25, 2026

ಶಿವಮೊಗ್ಗದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಜನ್ಮ ದಿನಾಚರಣೆ

Date:

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ (ರಿ) ಶಿವಮೊಗ್ಗ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ದಿನಾಂಕ 01-01-2023 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.

ಸನ್ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಡಾ.ನಾಗೇಂದ್ರ ಎಫ್.‌ ಹೊನ್ನಳ್ಳಿ ರವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಸಮುದಾಯದ ಬಾಂಧವರಿಗೆ ಶುಭ ಕೋರಿದರು.

ಶಿವಮೊಗ್ಗ ಮಹಾನಗರ ಪಾಲಿಕೆಯ ಗೌರವಾನ್ವಿತ ಸದಸ್ಯರಾದ ಶ್ರೀಮತಿ ಕಲ್ಪನಾ ರಮೇಶ್‌ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಜಿ.ಬಿ. ವಿನಯರಾಜ್‌ ಇಟಗಿ, ಕನ್ನಡ ಉಪನ್ಯಾಸಕರು, ಶ್ರೀ ವಿದ್ಯಾನಿಕೇತನ ಕಾಲೇಜು, ಹಗರಿಬೊಮ್ಮನಹಳ್ಳಿ ಜಕಣಾಚಾರಿ ರವರ ಕುರಿತಾಗಿ ಉಪನ್ಯಾಸ ನೀಡಿದರು.

ಜಿಲ್ಲಾ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷರಾದ ಶ್ರೀ ಅಗರದಹಳ್ಳಿ ನಿರಂಜನ ಮೂರ್ತಿ, ಜಿಲ್ಲಾ ವಿಶ್ವ ಬ್ರಾಹ್ಮಣರ ಸಂಘದ ಅಧ್ಯಕ್ಷರಾದ ಶ್ರೀ ಎನ್.‌ ಸೋಮಾಚಾರಿ, ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶ್ರೀ ಎನ್.ರಮೇಶ್‌, ಹರಕೆರೆ ಕಾಳಿಕಾಂಬ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶ್ರೀ ಎಂ.ಶ್ರೀನಿವಾಸ ಮೂರ್ತಿ, ವಿವಿಧ ಇಲಾಖೆಯ ಅಧಿಕಾರಿ ಅಥವಾ ಸಿಬ್ಬಂದಿಗಳು ಮತ್ತು ಸಮಾಜ ಬಾಂಧವರು ಹಾಗೂ ಕಛೇರಿ ಸಿಬ್ಬಂದಿಗಳು ಹಾಜರಿದ್ದರು.

ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್. ಸ್ವಾಗತಿಸಿ ಸಮಾಜದ ಶ್ರೀ ಮಾಲತೇಶ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...