ಸಂಸದ ಶ್ರೀ ಬಿ. ವೈ. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣದ ನಿರ್ವಾಹಕ ಪ್ರಸನ್ನ ಭಟ್ (25) ಅವರು ನಿನ್ನೆ ಆಕಸ್ಮಿಕವಾಗಿ ನಿಧನರಾಗಿದ್ದಾರೆ. ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ರಾಮನಗರದಿಂದ ನೇರವಾಗಿ ಹೊಸನಗರಕ್ಕೆ ತರುವ ವ್ಯವಸ್ಥೆ ಮಾಡಲಾಗಿದೆ.
ಮಾವಿನಕೊಪ್ಪದಿಂದ ಹೊಸನಗರದ ನೆಹರು ಮೈದಾನದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನೆಹರು ಮೈದಾನದಲ್ಲಿ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರವನ್ನು ಸಂಜೆ 5 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.
ಸಂಜೆ 6: ಗಂಟೆಯ ನಂತರ ಅಂತಿಮ ವಿಧಿ ವಿಧಾನಗಳ ಮೂಲಕ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.