Monday, March 23, 2026
Monday, March 23, 2026

ಕುವೆಂಪು ಕೃತಿ ಓದಿ ವಿಶ್ವಮಾನವರಾಗಿ-ಡಾ.ಶಿವಾನಂದ ಕಾಪಶಿ

Date:

ದಾವಣಗೆರೆ: ವಿಶ್ವಮಾನವ ದಿನಾಚರಣೆ ಅತ್ಯಂತ ವಿಶೇಷ. ರಾಷ್ಟ್ರಕವಿ ಕುವೆಂಪುರವರ ಸಾಹಿತ್ಯ ಕೃತಿಗಳನ್ನು ಓದಿ ಮನನ ಮಾಡಿಕೊಳ್ಳುವ ಮೂಲಕ ನಾವು ವಿಶ್ವ ಮಾನವರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಾನಂದ ಕಾಪಶಿ ಕರೆ ನೀಡಿದರು.

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ , ಕನ್ನಡ ಮತ್ತು ಸಂಸೃತಿ ಇಲಾಖೆ ಸಹಯೋಗದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವರಾಗಬೇಕೆಂಬ ಸಂದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚನ್ನಪ್ಪ ಮಾತನಾಡಿ, ಮತ-ಪಥಗಳ ಹೆಸರನ್ನು ಬಿಟ್ಟು ವಿಶ್ವಪಥಕ್ಕೆ ಬನ್ನಿ ಎಂಬ ಕುವೆಂಪುರವರ ವಿಶ್ವ ಮಾನವ ಸಂದೇಶವನ್ನು ಸ್ಮರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಮಾತನಾಡಿ, ಕುವೆಂಪು ಅವರ ಸಂದೇಶಗಳು ಎಲ್ಲ ಕಾಲಗಳಲ್ಲಿಯೂ ಪ್ರಸ್ತುತವಾಗಿವಾಗಿವೆ ಎಂದ ಅವರು, ಕುವೆಂಪು 1956 ರಲ್ಲಿ ತಮ್ಮ ಮಗ ತೇಜಸ್ವಿಯವರಿಗೆ ಬರೆದ ಪತ್ರವನ್ನು ಓದಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ನಾಮದೇವಪ್ಪ, ನಗರವಾಣಿ ದಿನಪತ್ರಿಕೆ ಸಂಪಾದಕ ಬಿ.ಎನ್ ಮಲ್ಲೇಶ್, ದಲಿತ ಮುಖಂಡ ತಿಮ್ಮಣ್ಣ, ವಿಶ್ವಮಾನವ ಮಂಟಪದ ಅಧ್ಯಕ್ಷ ಅವರಗೆರೆ ರುದ್ರಮುನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...