Monday, August 17, 2026
Monday, August 17, 2026

ಕುವೆಂಪು ಕೃತಿ ಓದಿ ವಿಶ್ವಮಾನವರಾಗಿ-ಡಾ.ಶಿವಾನಂದ ಕಾಪಶಿ

Date:

ದಾವಣಗೆರೆ: ವಿಶ್ವಮಾನವ ದಿನಾಚರಣೆ ಅತ್ಯಂತ ವಿಶೇಷ. ರಾಷ್ಟ್ರಕವಿ ಕುವೆಂಪುರವರ ಸಾಹಿತ್ಯ ಕೃತಿಗಳನ್ನು ಓದಿ ಮನನ ಮಾಡಿಕೊಳ್ಳುವ ಮೂಲಕ ನಾವು ವಿಶ್ವ ಮಾನವರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಾನಂದ ಕಾಪಶಿ ಕರೆ ನೀಡಿದರು.

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ , ಕನ್ನಡ ಮತ್ತು ಸಂಸೃತಿ ಇಲಾಖೆ ಸಹಯೋಗದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವರಾಗಬೇಕೆಂಬ ಸಂದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚನ್ನಪ್ಪ ಮಾತನಾಡಿ, ಮತ-ಪಥಗಳ ಹೆಸರನ್ನು ಬಿಟ್ಟು ವಿಶ್ವಪಥಕ್ಕೆ ಬನ್ನಿ ಎಂಬ ಕುವೆಂಪುರವರ ವಿಶ್ವ ಮಾನವ ಸಂದೇಶವನ್ನು ಸ್ಮರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಮಾತನಾಡಿ, ಕುವೆಂಪು ಅವರ ಸಂದೇಶಗಳು ಎಲ್ಲ ಕಾಲಗಳಲ್ಲಿಯೂ ಪ್ರಸ್ತುತವಾಗಿವಾಗಿವೆ ಎಂದ ಅವರು, ಕುವೆಂಪು 1956 ರಲ್ಲಿ ತಮ್ಮ ಮಗ ತೇಜಸ್ವಿಯವರಿಗೆ ಬರೆದ ಪತ್ರವನ್ನು ಓದಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ನಾಮದೇವಪ್ಪ, ನಗರವಾಣಿ ದಿನಪತ್ರಿಕೆ ಸಂಪಾದಕ ಬಿ.ಎನ್ ಮಲ್ಲೇಶ್, ದಲಿತ ಮುಖಂಡ ತಿಮ್ಮಣ್ಣ, ವಿಶ್ವಮಾನವ ಮಂಟಪದ ಅಧ್ಯಕ್ಷ ಅವರಗೆರೆ ರುದ್ರಮುನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...