Sunday, December 14, 2025
Sunday, December 14, 2025

ಚಿಕ್ಕಮಗಳೂರಿನಲ್ಲಿ ಭೀಮ್ ಕೋರೆಂಗಾವ್ ವಿಜಯೋತ್ಸವ

Date:

ಚಿಕ್ಕಮಗಳೂರು: ಭೀಮ್ ಕೋರೆಂಗಾವ್ ವಿಜಯೋತ್ಸವ ಪ್ರಯುಕ್ತ ಭೀಮ್ ಕೋರೆಂಗಾವ್ ಆಚರಣಾ ಸಮಿತಿ, ಜಿಲ್ಲಾ ಭೀಮ್ ಆರ್ಮಿ ಹಾಗೂ ಅನೇಕ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಬೈಕ್ ಹಾಗೂ ಆಟೋ ಸೇರಿದಂತೆ ನೂರಾರು ವಾಹನಗಳ ಮೂಲಕ ನಗರದ ಪ್ರಮುಖ ರಸ್ತೆಯಲ್ಲಿ ಮುಖಂಡರುಗಳು ವಿಜಯೋತ್ಸವದ ಮೆರವಣಿಗೆ ನಡೆಸಿದರು.

ಮೆರವಣಿಗೆಯು ತೊಂಗರಿಹಂಕಲ್ ವೃತ್ತದಿಂದ ಪ್ರಾರಂಭಗೊಂಡು ಐ.ಜಿ.ರಸ್ತೆ, ಮಲ್ಲಂದೂರು, ವಿಜಯಪುರ, ರತ್ನಗಿರಿ ರಸ್ತೆ, ಕೆಇಬಿ, ಹನುಮಂತಪ್ಪ ಸರ್ಕಲ್, ಎಂ.ಜಿ.ರಸ್ತೆ ಮುಖಾಂತರ ಆಜಾದ್ ಪಾರ್ಕ್ನಲ್ಲಿ ಮುಕ್ತಾಯವಾಯಿತು.

ಈ ವೇಳೆ ಮಾತನಾಡಿದ ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್ ಜ.4 ರಂದು ಮಧ್ಯಾಹ್ನ 2 ಗಂಟೆಗೆ 205ನೇ ಭೀಮಾ ಕೋರೆಂಗಾವ್ ವಿಜಯೋತ್ಸವವನ್ನು ಕೆಇಬಿ ಕಚೇರಿಯಿಂದ ಎಂ.ಜಿ.ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿ ಆಜಾದ್ ಪಾರ್ಕ್ನಲ್ಲಿ ಸಮಾವೇಶಗೊಂಡು ಬೃಹತ್ ಬಹಿರಂಗ ಸಭೆ ನಡೆಯಲಿದೆ. ಕಾರ್ಯಕ್ರಮಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಮೊಮ್ಮಗ ಡಾ. ರಾಜರತ್ನ ಅಂಬೇಡ್ಕರ್, ಮೈಸೂರಿನ ಉರಿಪೆದ್ದ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಪ್ರೋ. ಮಹೇಂದ್ರ ಚಂದ್ರಗುರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಭೀಮ್ ಆರ್ಮಿ ಅಧ್ಯಕ್ಷ ಗಿರೀಶ್, ನಗರಸಭಾ ಸದಸ್ಯರಾದ ಮುನೀರ್ ಅಹ್ಮದ್, ಖಲಂದರ್, ಮಾಜಿ ಸದಸ್ಯ ಜಗದೀಶ್, ಕಾಂಗ್ರೆಸ್ ಮುಖಂಡ ನಯಾಜ್, ಮುಖಂಡರುಗಳಾದ ವಿಜಯ್, ಭರತ್, ಉಪ್ಪಳ್ಳಿ ರಾಜು, ವಕೀಲ ಅನಿಲ್‌ಕುಮಾರ್, ರಮೇಶ್, ಚಿದಾನಂದ್, ಪ್ರವೀಣ್, ಧರ್ಮೇಶ್, ರಾಕೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...