Wednesday, April 1, 2026
Wednesday, April 1, 2026

ಚಿಕ್ಕಮಗಳೂರಿನಲ್ಲಿ ಭೀಮ್ ಕೋರೆಂಗಾವ್ ವಿಜಯೋತ್ಸವ

Date:

ಚಿಕ್ಕಮಗಳೂರು: ಭೀಮ್ ಕೋರೆಂಗಾವ್ ವಿಜಯೋತ್ಸವ ಪ್ರಯುಕ್ತ ಭೀಮ್ ಕೋರೆಂಗಾವ್ ಆಚರಣಾ ಸಮಿತಿ, ಜಿಲ್ಲಾ ಭೀಮ್ ಆರ್ಮಿ ಹಾಗೂ ಅನೇಕ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಬೈಕ್ ಹಾಗೂ ಆಟೋ ಸೇರಿದಂತೆ ನೂರಾರು ವಾಹನಗಳ ಮೂಲಕ ನಗರದ ಪ್ರಮುಖ ರಸ್ತೆಯಲ್ಲಿ ಮುಖಂಡರುಗಳು ವಿಜಯೋತ್ಸವದ ಮೆರವಣಿಗೆ ನಡೆಸಿದರು.

ಮೆರವಣಿಗೆಯು ತೊಂಗರಿಹಂಕಲ್ ವೃತ್ತದಿಂದ ಪ್ರಾರಂಭಗೊಂಡು ಐ.ಜಿ.ರಸ್ತೆ, ಮಲ್ಲಂದೂರು, ವಿಜಯಪುರ, ರತ್ನಗಿರಿ ರಸ್ತೆ, ಕೆಇಬಿ, ಹನುಮಂತಪ್ಪ ಸರ್ಕಲ್, ಎಂ.ಜಿ.ರಸ್ತೆ ಮುಖಾಂತರ ಆಜಾದ್ ಪಾರ್ಕ್ನಲ್ಲಿ ಮುಕ್ತಾಯವಾಯಿತು.

ಈ ವೇಳೆ ಮಾತನಾಡಿದ ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್ ಜ.4 ರಂದು ಮಧ್ಯಾಹ್ನ 2 ಗಂಟೆಗೆ 205ನೇ ಭೀಮಾ ಕೋರೆಂಗಾವ್ ವಿಜಯೋತ್ಸವವನ್ನು ಕೆಇಬಿ ಕಚೇರಿಯಿಂದ ಎಂ.ಜಿ.ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿ ಆಜಾದ್ ಪಾರ್ಕ್ನಲ್ಲಿ ಸಮಾವೇಶಗೊಂಡು ಬೃಹತ್ ಬಹಿರಂಗ ಸಭೆ ನಡೆಯಲಿದೆ. ಕಾರ್ಯಕ್ರಮಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಮೊಮ್ಮಗ ಡಾ. ರಾಜರತ್ನ ಅಂಬೇಡ್ಕರ್, ಮೈಸೂರಿನ ಉರಿಪೆದ್ದ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಪ್ರೋ. ಮಹೇಂದ್ರ ಚಂದ್ರಗುರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಭೀಮ್ ಆರ್ಮಿ ಅಧ್ಯಕ್ಷ ಗಿರೀಶ್, ನಗರಸಭಾ ಸದಸ್ಯರಾದ ಮುನೀರ್ ಅಹ್ಮದ್, ಖಲಂದರ್, ಮಾಜಿ ಸದಸ್ಯ ಜಗದೀಶ್, ಕಾಂಗ್ರೆಸ್ ಮುಖಂಡ ನಯಾಜ್, ಮುಖಂಡರುಗಳಾದ ವಿಜಯ್, ಭರತ್, ಉಪ್ಪಳ್ಳಿ ರಾಜು, ವಕೀಲ ಅನಿಲ್‌ಕುಮಾರ್, ರಮೇಶ್, ಚಿದಾನಂದ್, ಪ್ರವೀಣ್, ಧರ್ಮೇಶ್, ರಾಕೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...