Monday, August 17, 2026
Monday, August 17, 2026

ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಆಶ್ರಯದಲ್ಲಿ ರಾಜ್ಯಮಟ್ಟದ ತರಬೇತಿ ಶಿಬಿರ

Date:

ಶಿವಮೊಗ್ಗ:
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ.ಹಾಗೂ ಸಹಕಾರ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜ.07 ರಂದು ರಾಜ್ಯ ಮಟ್ಟದ ಒಂದು ದಿನದ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ದಿ ನೆಸ್ಟ್ ಹೋಂಸ್ಟೇ, ಶ್ರೀ ಲಕ್ಷ್ಮೀ ಫಾರಂ, ಬೇದನಬೈಲು, ನಿಜಗುರು, ಆರಗ ಅಂಚೆ, ತೀರ್ಥಹಳ್ಳಿ ತಾಲ್ಲೂಕು ಇಲ್ಲಿ ಶಿಬಿರ ಆಯೋಜಿಸಿದ್ದು ಜ.07 ರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.

ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಎನ್.ಹೆಚ್.ಶ್ರೀಪಾದರಾವ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ಎಲ್.ಜಗದೀಶ್ವರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿ.ಬೆಂಗಳೂರು ನಿರ್ದೇಶಕ ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕಂತರಾದ ಹೆಚ್.ಎನ್.ವಿಜಯದೇವ್, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾ ಮಂಡಳ ನಿ. ಬೆಂಗಳೂರು ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕಂತ ಡಾ.ಬಿ.ಡಿ.ಭೂಕಾಂತ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ.ಬೆಂಗಳೂರು ನಿರ್ದೇಶಕರಾದ ಎ.ಸಿ.ನಾಗರಾಜ್, ಹೆಚ್.ಎನ್.ಅಶೋಕ, ಆರ್.ರಾಮಿರೆಡ್ಡಿ, ಕೆ.ಸಿ.ನಾಗರತ್ನ, ಸಹಕಾರ ಹಾಲು ಒಕ್ಕೂಟದ ನಿರ್ದೇಶಕರಾದ ಕೆ.ಎ.ತಾರಾನಾಥ, ಕೆ.ರತ್ನಾಕರ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ವ್ಯವಸ್ಥಾಪಕ ನಿರ್ದೇಶಕ ಎಸ್.ಅರಳಿ ಸೂರ್ಯಕಾಂತ್, ಕಾರ್ಯದರ್ಶಿ ಲಕ್ಷ್ಮೀಪತಯ್ಯ, ಸಹಕಾರ ಸಂಘಗಳ ಉಪನಿಬಂಧಕ ಜಿ.ವಾಸುದೇವ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ವಿ.ಮಹೇಶ್ವರಪ್ಪ, ಸಹಕಾರ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎಸ್.ಬಸವರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...