Wednesday, February 4, 2026
Wednesday, February 4, 2026

ಸಿರಿಧಾನ್ಯ ಕೃಷಿಯಲ್ಲಿ ಕರ್ನಾಟಕ ದೇಶಕ್ಕೇ ಮಾದರಿ- ಬಿ.ಸಿ.ಪಾಟೀಲ್

Date:

ಜನರು “ಜಂಕ್ಫುಡ್ ಗುಲಾಮಗಿರಿ”ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮವನ್ನು ಕೃಷಿ ಸಚಿವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

2023 ರ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ. ಅದರನ್ವಯ
ಪೂರ್ವಭಾವಿಯಾಗಿ ಸಭೆ ನಡೆಯುತ್ತಿದೆ.ಸಿರಿಧಾನ್ಯಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ. ಕರ್ನಾಟಕ “ಸಿರಿಧಾನ್ಯಗಳ ರಾಜ”ಎಂದು ಕರೆಯಲಾಗಿದೆ.

ಮಸಾಲೆ ಉತ್ಪನ್ನಗಳು, ಸೌಂದರ್ಯವರ್ದಕ ಉತ್ಪನ್ನಗಳು,ಪರಿಸರ ಸ್ನೇಹಿ ಉತ್ಪನ್ನಗಳುಸೇರಿದಂತೆ ಹಲವು ಉತ್ಪನ್ನಗಳನ್ನು ಸಹ ಸಾವಯವ ಸಿರಿಧಾನ್ಯದಿಂದ ತಯಾರಿಸಲಾಗುತ್ತಿದ್ದೆ. ಪೌಷ್ಠಿಕ ಆಹಾರದ ಬಗ್ಗೆ ಜನ ಹೆಚ್ಚು ಉತ್ಸುಕರಾಗುತ್ತಿದ್ದಾರೆ. ಜಂಕ್ ಫುಡ್‌ಗಳ ಗುಲಾಮರು ಜನರಾಗಿದ್ದು ಇದರಿಂದ ಆರೋಗ್ಯ ಹದಗೆಡುತ್ತಿದ್ದೆ. ಹೀಗಾಗಿ ಜನರು ಇತ್ತೀಚೆಗೆ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಜನರು ಜಂಕ್ಪಪುಡ್ ಮಾದರಿಯನ್ನು ಕೈಬಿಡಬೇಕು.ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕರೆ ನೀಡಿದರು.

ಕೋವಿಡ್ ಸಾಂಕ್ತಾಮಿಕ ಬಳಿಕ ಜನರು ಆರೋಗ್ಯದತ್ತ ಹೆಚ್ಚೆಚ್ಚು ಗಮನ ಹರಿಸುತ್ತಿದ್ದಾರೆ. ಭವಿಷ್ಯದ ಆಹಾರ ಸಿರಿಧಾನ್ಯವಾಗಿದೆ‌. ಹೀಗಾಗಿ ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸಲು ಹಾಗೂ ಸಿರಿಧಾನ್ಯ ಸಾವಯವ ಬೆಳೆಗಾರರಿಗೆ ಉತ್ತೇಜನ ನೀಡಲು ಬೆಂಗಳೂರಿನ ಅರಮನೆ ಮೈದಾನ ತ್ರಿಪಿರವಾಸಿನಿಯಲ್ಲಿ ಜನವರಿ 20 ರಿಂದ‌22 ರವರೆಗೆ ಸಿರಿಧಾನ್ಯ ಸಾವಯವ ಮೇಳ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಸಚಿವರುಗಳು ಆಗಮಿಸುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಾರೆ. ಜನವರಿ 14 ರಂದು ಸಿರಿಧಾನ್ಯ ಸಾವಯವ ಕುರಿತು ಜಾಗೃತಿಗೆ ಕಬ್ಬನ್‌ಪಾರ್ಕಿನಲ್ಲಿ ವಾಕ್‌ಥಾನ್ ನಡೆಯಲಿದೆ. ಈಗಾಗಲೇ ರಾಜ್ಯದ‌ ಎಲ್ಲಾ ಜಿಲ್ಲೆಗಳಲ್ಲಿ ಸಿರಿಧಾನ್ಯ ಸಾವಯವ ಮೇಳಗಳು ನಡೆಯುತ್ತಿವೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಸಿರಿಧಾನ್ಯಗಳ ತೆನೆಯಿಂದ ಕಾರ್ಯಕ್ರಮದಲ್ಲಿ
ಕಾರ್ಯಕ್ರಮದಲ್ಲಿ ಸಿರಿಧಾನ್ಯ ಮೇಳದ ವೆಬ್‌ಸೈಟ್ ಅನ್ನು ಲೋಕಾರ್ಪಣೆಗೊಳಿಸಲಾಯಿತು.

ಕೃಷಿ ಇಲಾಖೆಯ ನಿರ್ದೇಶಕಜಿ.ಟಿ.ಪುತ್ರನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಕೃಷಿ‌ಇಲಾಖೆಯ ಆಯುಕ್ತರಾದ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ ,ಕೆಮಿಕ್‌ನಿರ್ದೇಶಕ ಪದ್ಮನಾಭಯ್ಯ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಬಂತನಾಳ್ ಜಲಾನಯನ ಅಭಿವೃದ್ಧಿಇಲಾಖೆಯ ನಿರ್ದೇಶಕ ಶ್ರೀನಿವಾಸ್, ಅಪೆಡಾ ಜಿಎಂ, ರವೀಂದ್ರ ಸೇರಿದಂತೆ ಮತ್ತಿತ್ತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದು‌ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...