Sunday, December 14, 2025
Sunday, December 14, 2025

ಪತ್ರಿಕಾ ವಿತರಕರಿಗೆ ಸರ್ಕಾರ ಭದ್ರತೆ ಒದಗಿಸಬೇಕು-ಪತ್ರಕರ್ತ ಮಹೇಶ್

Date:

ಸೊರಬ: ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೇ ಪತ್ರಿಕಾ ವಿತರಣೆ ಮಾಡುವುದು ಸವಾಲಿನ ಕೆಲಸವಾಗಿದೆ. ಪತ್ರಿಕಾ ವಿತರಕರಿಗೆ ಸರ್ಕಾರ ಜೀವನ ಭದ್ರತೆ ಒದಗಿಸಬೇಕು ಎಂದು ಪತ್ರಕರ್ತ ಮಹೇಶ್ ಗೋಖಲೆ ಒತ್ತಾಯಿಸಿದರು.
ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಸೊರಬದಲ್ಲಿ 2023ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣಗಳು, ಅಂತರ್ಜಾಲ ಪತ್ರಿಕೋದ್ಯಮದ ಪೈಪೋಟಿಯ ನಡುವೆ ಪತ್ರಿಕೆಗಳು ಮುದ್ರಣವಾಗುವವರೆಗೂ ಹಲವು ಹಂತದಲ್ಲಿ ಕಾರ್ಯನಿರ್ವಹಿಸಲಾಗುತ್ತದೆ. ಆದರೆ, ಮುದ್ರಣಗೊಂಡ ಪತ್ರಿಕೆಗಳನ್ನು ಓದುಗನ ಮನೆ ಬಾಗಿಲಿಗೆ ತಲುಪಿಸುವ ಪತ್ರಿಕಾ ವಿತರಕರು ಪತ್ರಿಕೆಗಳಿಗೆ ಕಳಸವಿದ್ದಂತೆ ಎಂದರೆ ತಪ್ಪಾಗಲಾರದು. ಪತ್ರಿಕೆಗಳು ನೀಡುವ ಕಮಿಷನ್ ಆಧಾರದಲ್ಲಿ ಕಾರ್ಯನಿರ್ವಹಿಸುವ ಪತ್ರಿಕಾ ವಿತರಕರಿಗೆ ಜೀವನ ಭದ್ರತೆ, ನಿವೇಶನ, ವಾಹನ ಸೌಲಭ್ಯ, ವೃದ್ಧಾಪ್ಯದಲ್ಲಿ ವೇತನ ಸೇರಿದಂತೆ ಸರ್ಕಾರದಿಂದ ಸಾಧ್ಯವಾದಷ್ಟು ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ಶಾಖೆ ಉಪಾಧ್ಯಕ್ಷ ಮುಹಮ್ಮದ್ ಆರೀಫ್, ಸದಸ್ಯ ಮಧುಕೇಶ್ವರ್, ಪತ್ರಿಕಾ ವಿತರಕರಾದ ಸುರೇಶ್, ಪುರುಷೋತ್ತಮ ಚಂದ್ರಗುತ್ತಿ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...