Tuesday, February 3, 2026
Tuesday, February 3, 2026

ಮಹಿಳೆಯರು ಹೆಚ್ಚು ಅಧ್ಯಯನ ಮಾಡಿ ಸಾಧನೆ ಗುರಿ ಹೊಂದಬೇಕು-ಮೋಹನ್ ಕುಮಾರ್

Date:

ಕಳಸ: ಮಹಿಳೆಯರು ಜೀವನದಲ್ಲಿ ಸಿಗುವ ಅವಕಾಶವನ್ನು ಸದುಪಯೋಗಪಡಿಸಿ ಕೊಂಡು ಮುಂಬರುವ ದಿನಗಳಲ್ಲಿ ಹೆಚ್ಚು ಅಧ್ಯಯನ ನಡೆಸಿ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಸಹಾಯಕ ಸಬ್ ಇನ್ಸ್ಪೆಕ್ಟರ್ ಡಾ. ಸಿ.ಆರ್.ಮೋಹನ್‌ಕುಮಾರ್ ಅವರು ಹೇಳಿದರು.

ಶ್ರೀ ಕ್ಷೇತ್ರ‍್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಮಹಿಳಾ ಜ್ಞಾನ ವಿಕಾಸ ಅಡಿಯಲ್ಲಿ ಪಟ್ಟಣದ ಕಳಸ ಪೊಲೀಸ್ ಠಾಣೆ ಆವರಣದಲ್ಲಿ ಮಹಿಳಾ ಅಧ್ಯಯನ ಪ್ರವಾಸ ಕಾರ್ಯಕ್ರಮವನ್ನು ಮಂಗಳವಾರ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಪೊಲೀಸ್ ಇಲಾಖೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಜನ ಸ್ನೇಹಿ ವ್ಯವಸ್ಥೆ, ಬೀಟ್, ಮಹಿಳಾ ಕಾನೂನು, 112ರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಮಹಿಳೆಯರು ಪುರುಷರಂತೆ ಸಮಾನ ವೆಂಬ ಭಾವನೆ ಬೆಳೆಸಿಕೊಂಡು ಉತ್ತಮ ಸಾಧನೆ ಬಗ್ಗೆ ಗಮನ ಹರಿಸಬೇಕು ಎಂದರು.

ಮಹಿಳಾ ಜ್ಞಾನ ವಿಕಾಸ ಮೆಲ್ವಿಚಾರಕಿ ರಂಜಿತಾ ಮಾತನಾಡಿ ಮಹಿಳಾ ಸಬಲೀಕರಣ ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮಹಿಳೆ ಪ್ರಗತಿ ಸಾಧಿಸಿದಾಗ ಮಾತ್ರ ಸಬಲರಾಗಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಪ್ರೇರಣಾ, ಪ್ರೇಮ, ಹೇಮಾವತಿ ಸ್ನೇಹ, ಪ್ರಕೃತಿ, ಸಾವಿತ್ರಿ ಜಾನಕಿ, ಭಾರತಿ, ಸುಮಿತ್ರ, ಮಾಲತಿ ಹಾಗೂ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...