Saturday, May 16, 2026
Saturday, May 16, 2026

ಕನ್ನಡದ ಕಾಂತಾರಕ್ಕೆ ನೂರುದಿನದ ಮೆರುಗು

Date:

2022 ರ ಸಾಲಿನಲ್ಲಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿರುವ ಸಿನಿಮಾ ಎಂದರೆ ಅದು ಕಾಂತಾರ. ಇದರಲ್ಲಿ ರಿಷಬ್‌ ಶೆಟ್ಟಿ ಅವರದ್ದು ಪ್ರಧಾನ ಭೂಮಿಕೆ. ರಿಷಬ್ ಶೆಟ್ಟಿ ಅವರ ಅಭಿನಯ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದೆ.

ಈ ಜನಪ್ರಿಯ ಪಡೆದ ಕಾಂತಾರ ಸಿನಿಮಾವು ತೆರೆಕಂಡು100 ದಿನಗಳು ಕಳೆದಿವೆ. ಭಾರತದಲ್ಲಿ ರಿಷಬ್‌ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟ ಸಿನಿಮಾ ಎಂದೇ ಖ್ಯಾತಿ ಗಳಿಸಿದೆ. ಈಗ ಈ ಸಿನಿಮಾವು 100 ದಿನದ ಸಂಭ್ರಮದಲ್ಲಿದೆ.

ಕಾಂತಾರ ಸಿನಿಮಾವು 16 ಕೋಟಿ ರೂ. ಬಜೆಟ್‌ ನಲ್ಲಿ ತಯಾರಾಗಿದೆ. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಿದ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ತುಳು ಭಾಷೆಯಲ್ಲೂ ಕೂಡ ಡಬ್ ಆಗಿದೆ.

ಚಿತ್ರೀಕರಣ,ಕಥೆ,ಅಭಿನಯ, ಲೊಕೇಶನ್, ಎಲ್ಲಾ ದೃಷ್ಟಿಯಿಂದ ತಯಾರಾಗಿ ಕಾಂತಾರ
ಊಹೆಗೂ ಮೀರಿದ ಗಲ್ಲಾ ಪೆಟ್ಟಿಗೆ ಯಶಸ್ಸು ಗಳಿಸಿದೆ.

ಕಾಂತಾರ ಸಿನಿಮಾವನ್ನು ಅಮೇಜಾನ್‌ ಪ್ರೈಮ್‌ ಓಟಿಟಿ ಖರೀದಿ ಮಾಡಿರುವುದು ಅದರ ಹೆಗ್ಗಳಿಕೆ.

ಇದೇ ಜ.15 ರಂದು ಕಿರುತೆರೆಯಲ್ಲೂ ಕಾಂತಾರ ಸಿನಿಮಾ ಶೋ ಆಗಲಿದೆ.

ತುಳುನಾಡಿನ ಆಚರಣೆ ಮತ್ತು ಅಲ್ಲಿನ, ಕಾಡಿನಲ್ಲಿವಾಸಿಸುವ ಜನರ ಬದುಕನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ದೈವದ ಬಗೆಗಿನ ನಂಬಿಕೆಯ ಮೇಲೆ ಸಿನಿಮಾ ಸಾಗುತ್ತದೆ.

ಸಾಮಾನ್ಯವಾಗಿ ಇಂಥಹ ಸಿನಿಮಾಗಳು ಕರಾವಳಿ ಭಾಗದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಆದರೆ ಕಾಂತಾರ ಮಾತ್ರ ಕರಾವಳಿ ಮಾತ್ರವಲ್ಲದೆ, ಇಡೀ ದೇಶದಲ್ಲಿ ತನ್ನದೇ ಜನಪ್ರಿಯತೆ ಪಡೆದಿದೆ.

ರಜಿನಿಕಾಂತ್‌, ಕಮಲ್‌ ಹಾಸನ್‌ ಹೀಗೆ ಅನೇಕ ದೊಡ್ಡ ದೊಡ್ಡ ಸ್ಟಾರ್‌ ಗಳು ಸಿನಿಮಾದ ಬಗ್ಗೆ ಶ್ಲಾಘಿಸಿದ್ದಾರೆ.

ಸಿನಿಮಾಕ್ಕೆ ಎಲ್ಲೆಡೆ ಸಿಕ್ಕ ಪ್ರತಿಕ್ರಿಯೆ ನೋಡಿದಾಗ ಪ್ರತಿಕ್ರಿಯೆ ಅತ್ಯಂತ ಆಪ್ತವಾಗಿದೆ. ಅಷ್ಟೇ ಅಲ್ಲ ಇದರ ಎರಡನೇ ಭಾಗ ಚಲನಚಿತ್ರ ಆಗಬೇಕೆಂದು ಪ್ರೇಕ್ಷಕರು ಬಯಸಿದ್ದಾರೆ. ಆದರೆ, ಇದುವೆರೆಗೂ ಕಾಂತಾರ -2 ಸಿನಿಮಾ ಬರುತ್ತದೆ ಎನ್ನುವ ಬಗ್ಗೆ ಅಧಿಕೃತವಾಗಿ ಮಾಹಿತಿ ಇನ್ನೂ ಹೊರ ಬಿದ್ದಿಲ್ಲ.

ಸಿನಿಮಾ ರಿಲೀಸ್ ಆಗಿ 100 ದಿನಗಳು ಪೂರೈಸಿದೆ. ಈ ಬಗ್ಗೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಟ್ವಿಟರ್‌ ನಲ್ಲಿ ಹೀಗೆ ಬರೆದು ಕೊಂಡಿದ್ದಾರೆ. ” ಬೆಳಕು..!! ಆದರೆ, ಇದು ಬೆಳಕಲ್ಲಾ 100 ದಿನದ ದರ್ಶನ” ಎಂದು ಬರೆದುಕೊಂಡಿದ್ದಾರೆ. ಹೀಗೆ ಕಾಂತಾರ ಸಿನಿಮಾದ 100 ದಿನದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...