Thursday, September 17, 2026
Thursday, September 17, 2026

ರಾಜ್ಯ ಕಾನೂನು ಪ್ರಾಧಿಕಾರ ರಚನೆಗೆ ಒತ್ತಾಯ

Date:

ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕನ್ನಡದಲ್ಲಿ ಕಾನೂನು ಸಾಹಿತ್ಯ’ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿ ಕಾನೂನು ತಜ್ಞರು, ಮಾತೃಭಾಷೆಯಲ್ಲಿ ಪುಸ್ತಕಗಳು ಲಭ್ಯವಿಲ್ಲದ ಕಾರಣ ಸಾಮಾನ್ಯ ಜನರಿಗೆ ಕಾನೂನಿನ ಪ್ರಮುಖ ಅಂಶಗಳ ಬಗ್ಗೆ ತಿಳಿಯದಂತಾಗಿದೆ.

ನ್ಯಾಯಾಲಯದ ಕಾರ್ಯವೈಖರಿಯನ್ನು ಬಹುಪಾಲು ಇಂಗ್ಲಿಷ್ನಲ್ಲಿ ಮಾಡಲಾಗುತ್ತಿರುವ ಕಾರಣ ಕೆಲವರಿಗಷ್ಟೇ ಕಾನೂನಿನ ತೀರ್ಪಿನ ಬಗ್ಗೆ ತಿಳಿಯುವಂತಾಗುತ್ತಿದೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಅರಳಿ ನಾಗರಾಜ್ ಮಾತನಾಡಿ, ಸರ್ಕಾರ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಲಿ ಅಥವಾ ಇಲ್ಲದಿರಲಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಕನ್ನಡ ಭಾಷೆಯಲ್ಲಿ ಕಾನೂನು ಸಾಹಿತ್ಯವನ್ನು ಹೊರತರಲು ಮುಂದಾಗಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...