Tuesday, March 24, 2026
Tuesday, March 24, 2026

ಮಂಜು ಮುಸುಕಿದ ದೆಹಲಿ ವಿಮಾನ ಸಂಚಾರ ವ್ಯತ್ಯಯ

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು ತೀವ್ರ ಶೀತ ಅಲೆಯಂತಹ ಪರಿಸ್ಥಿತಿಯನ್ನು ದಾಖಲಿಸಿದೆ. ಅಧಿಕ ಚಳಿಗೆ ಜನ ಮನೆ ಬಿಟ್ಟು ಹೊರಬಾರದಂತ ಸ್ಥಿತಿ ನಿರ್ಮಾಣವಾಗಿದೆ. ಕೆಲ ಪ್ರದೇಶದಲ್ಲಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಟ್ಟ ಮಂಜಿನಿಂದಾಗಿ ವಿಮಾನಗಳು ತಡವಾಗುವ ಸಾಧ್ಯತೆಯ ಬಗ್ಗೆ ಮುನ್ಸೂಚನೆಯನ್ನು ನೀಡಿದೆ.

ವಿಮಾನ ನಿಲ್ದಾಣದಲ್ಲಿ ಕಡಿಮೆ ಗೋಚರತೆಯ ಅಪಾಯವನ್ನು ಎದುರಿಸಲು ವಿಮಾನ ನಿಲ್ದಾಣದಲ್ಲಿ ಹಲವಾರು ಕಾರ್ಯವಿಧಾನಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಿಗೆ ಸಲಹೆ ನೀಡಿದ್ದಾರೆ.

ಮಂಜಿನಿಂದಾಗಿ ಉತ್ತರ ರೈಲ್ವೆ ಪ್ರದೇಶದಲ್ಲಿ ಸುಮಾರು 32 ರೈಲುಗಳು ತಡವಾಗಿ ಸಂಚರಿಸುತ್ತಿವೆ. ಜೊತೆಗೆ ಕೆಟ್ಟ ಹವಾಮಾನ ಸಮಸ್ಯೆಗಳಿಂದ ದೆಹಲಿ ವಿಮಾನ ನಿಲ್ದಾಣದಿಂದ ಸುಮಾರು 34 ದೇಶೀಯ ನಿರ್ಗಮನ ವಿಮಾನಗಳು ವಿಳಂಬವಾಗಿವೆ.

ವಿವಿಧ ಸ್ಥಳಗಳಿಂದ ವಿಮಾನ ನಿಲ್ದಾಣದಲ್ಲಿ 12ಕ್ಕೂ ಹೆಚ್ಚು ಆಗಮನದ ವಿಮಾನಗಳು ವಿಳಂಬವಾಗಿವೆ. ಸಫ್ದರ್‌ಜಂಗ್‌ನಲ್ಲಿ 2.2 ಡಿಗ್ರಿ ಸೆಲ್ಸಿಯಸ್ ತಾಪಮಾನ ಹಾಗೂ ಲೋಧಿ ರಸ್ತೆಯಲ್ಲಿ ಕನಿಷ್ಠ 2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಐಎಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ದಟ್ಟವಾದ ಮಂಜು ವಾಯುವ್ಯ ಭಾರತದ ಮೇಲೆ ಮತ್ತು ದೇಶದ ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಅಧಿಕ ಆವರಿಸಿದೆ. ಇದರಿಂದಾಗಿ ವಾಹನ ಮತ್ತು ರೈಲು ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿದೆ.

ಎಲ್ಲಾ ವಿಮಾನ ಕಾರ್ಯಾಚರಣೆಗಳು ಪ್ರಸ್ತುತ ಸಾಮಾನ್ಯವಾಗಿವೆ. ಆದಾಗ್ಯೂ, ವಿಮಾನದ ಬಗ್ಗೆ ಇತ್ತೀಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ವಿನಂತಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಜು ಮತ್ತು ಕಡಿಮೆ ಗೋಚರತೆಯ ಪರಿಸ್ಥಿತಿಗಳಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು...

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ...

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...