Wednesday, October 2, 2024
Wednesday, October 2, 2024

ಹಳ್ಳಿಹಳ್ಳಿಗಳಲ್ಲಿ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ- ಯಡಿಯೂರಪ್ಪ

Date:

ಹೊಸನಗರ: ರಾಜ್ಯದಲ್ಲಿ ಅನೇಕ ಪಾದಯಾತ್ರೆಗಳ ಮೂಲಕ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಅಂದಿನ ಹೋರಾಟದ ಫಲ ಇಂದು ಬಿಜೆಪಿ ಅಧಿಕಾರ ನಡೆಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.

ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ 3 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಖಿಲ ಭಾರತ ವೀರಶೈವ ಸಮಾಜದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹೋರಾಟದ ದಿನದಲ್ಲಿ ಶಾಸಕರಾಗಿದ್ದವರು ನಾನು ಹಾಗೂ ದಕ್ಷಿಣ ಕನ್ನಡದ ವಸಂತ ಬಂಗೇರ. ಆದರೆ ಇಂದು ಹಳ್ಳಿಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶ ಕಂಡ ದಣಿವರಿಯದ ನಾಯಕರಾಗಿದ್ದು, ಅವರ ನೇತೃತ್ವದಲ್ಲಿ ನಾವೆಲ್ಲ ಕೆಲಸ ಮಾಡಬೇಕಾಗಿದೆ. ಸಮೃದ್ಧ ಭಾರತ ಕಟ್ಟಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಾಗರ ಶಾಸಕರಾದ ಹರತಾಳು ಹಾಲಪ್ಪ, ಮಳಲಿ ಮಠದ ಶ್ರೀ ಷ.ಬ್ರ.ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಮೂಲೆಗದ್ದೆ ಮಠದ ಶ್ರೀ ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮಿಗಳು, ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ರವರು, ಶ್ರೀ ಟಿ ಡಿ ಮೇಘರಾಜ್, ಶ್ರೀ ಎಸ್ ಎಸ್ ಜ್ಯೋತಿಪ್ರಕಾಶ್,ಶ್ರೀ ಎಸ್ ಆರ್ ಷಡಕ್ಷರಿ, ಶ್ರೀ ಚನ್ನವೀರಪ್ಪ,ಶ್ರೀ ಜಿ.ಯುವರಾಜ್, ಶ್ರೀ ಜಯಶೀಲಪ್ಪ ಗೌಡ್ರು,ಶ್ರೀ ಹಾಲಪ್ಪ ಗೌಡ್ರು,ಶ್ರೀ ಚಂದ್ರ ಮೌಳಿ, ಶ್ರೀ ಹಾಲಪ್ಪ ಚಿಕ್ಕಮಣತಿ, ಶ್ರೀಮತಿ ಅನಿತಾ ರವಿಶಂಕರ್,ಶ್ರೀ ಹೆಚ್ ಆರ್ ತೀರ್ಥೇಶ್, ಹಾಗೂ, ಮಹಾಸಭಾ ಎಲ್ಲಾ ಸದಸ್ಯರು, ಯುವ ವೇದಿಕೆಯ ಎಲ್ಲಾ ಸದಸ್ಯರು, ಮಹಿಳಾ ವೇದಿಕೆಯ ಎಲ್ಲಾ ಸದಸ್ಯರು, ವೀರಭದ್ರೇಶ್ವರ ದೇವನ ಸ್ಥಾನ ಸಮಿತಿಯ ಎಲ್ಲಾ ಸದಸ್ಯರು, ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...